Homeಮುಖಪುಟಸಂಭಾಲ್ ಹಿಂಸಾಚಾರ ಪ್ರಕರಣ: ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ಸಂಭಾಲ್ ಹಿಂಸಾಚಾರ ಪ್ರಕರಣ: ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

- Advertisement -
- Advertisement -

ನವೆಂಬರ್‌ನಲ್ಲಿ ಸಂಭಾಲ್ ಜಿಲ್ಲೆಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಸಮಾಜವಾದಿ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ಬಾರ್ಕ್ ಮತ್ತು ಇತರ 22 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಸಂಭಾಲ್‌ನಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನೀಡುವ ಮೂಲಕ ಜನಸಮೂಹವನ್ನು ಪ್ರಚೋದಿಸಿದ ಆರೋಪ ಸಂಸದ ಬಾರ್ಕ್ ಅವರ ಮೇಲಿದೆ ಎಂದು ಬುಧವಾರ ಸಂಭಾಲ್‌ನಲ್ಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. ಸಂಭಾಲ್ ಹಿಂಸಾಚಾರ ಪ್ರಕರಣ

ನವೆಂಬರ್ 24 ರಂದು ಶಾಹಿ ಜುಮಾ ಮಸೀದಿಯಲ್ಲಿ “ಕೆಲವು ಸಮಾಜ ವಿರೋಧಿ ಶಕ್ತಿಗಳು, ಅಪರಾಧಿಗಳು ಮತ್ತು ರಾಜಕೀಯವನ್ನು ಪ್ರತಿಪಾದಿಸುವ ಕೆಲವು ರಾಜಕೀಯ ವ್ಯಕ್ತಿಗಳು ಹಿಂಸಾಚಾರವನ್ನು ಪ್ರಚೋದಿಸಿದರು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆಪಾದಿತ ಪ್ರಚೋದನಕಾರಿ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಈ ಪ್ರಚೋದನೆಯೆ ಕಾರಣವಾಯಿತು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಪ್ರಚೋದನೆಯ ಕಾರಣದಿಂದಾಗಿ ಬೆಂಕಿ ಹಚ್ಚುವುದು, ಕಲ್ಲು ತೂರಾಟ ಮತ್ತು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಾವು 92 ಜನರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ” ಎಂದು ಪತ್ರಿಕೆ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. “ತನಿಖೆ ಇನ್ನೂ ಮುಂದುವರೆದಿದೆ ಮತ್ತು ಶೀಘ್ರದಲ್ಲೇ, ಭಾಗಿಯಾಗಿರುವ ಇತರರನ್ನು ಬಂಧಿಸಲಾಗುವುದು.” ಎಂದು ಅದು ಹೇಳಿದೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜುಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದ ಮೇರಗೆ ನಡೆಸಲಾಗುವ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಮೊಘಲ್ ದೊರೆ ಬಾಬರ್ 1526 ರಲ್ಲಿ ನಿರ್ಮಿಸಲಾದ ಶತಮಾನಗಳಷ್ಟು ಹಳೆಯದಾದ ಶಾಹಿ ಜುಮಾ ಮಸೀದಿಯನ್ನು ಶ್ರೀ ಹರಿಹರ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿರೆ ಎಂದು ಬಿಜೆಪಿ ಪರ ಬೆಂಬಲಿಗರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಈ ಹಿನ್ನಲೆಯಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಕೊತ್ವಾಲಿ ಸಂಭಾಲ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಎಫ್‌ಐಆರ್‌ ಸಂಬಂಧಿಸಿದಂತೆ ಚಂದೌಸಿಯ ಸಂಭಾಲ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರ (ಹಿರಿಯ ವಿಭಾಗ) ವಿಶೇಷ ಸಂಸದ/ಶಾಸಕ ನ್ಯಾಯಾಲಯದಲ್ಲಿ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ಸಂಸದ ಬಾರ್ಕ್ ಅವರು ರಾಜಕೀಯ ಲಾಭಕ್ಕಾಗಿ ಜನಸಮೂಹವನ್ನು ಪ್ರಚೋದಿಸಿದ್ದು, ಇದು ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಘಟನೆಗೆ ಕೆಲವು ದಿನಗಳ ಮೊದಲು ಬಾರ್ಕ್ ಶಾಹಿ ಜಾಮಾ ಮಸೀದಿಗೆ ಅನುಮತಿಯಿಲ್ಲದೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು ಮತ್ತು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಅವರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ಹಿಂಸಾಚಾರದ ನಂತರ ಹನ್ನೆರಡು ಎಫ್‌ಐಆರ್‌ಗಳನ್ನು ದಾಖಲಿಸಲಾಯಿತು ಮತ್ತು ಈ ವಿಷಯವನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ಘರ್ಷಣೆಯ ಸಮಯದಲ್ಲಿ ತಾನು ಬೆಂಗಳೂರಿನಲ್ಲಿದ್ದೆ ಎಂದು ಬಾರ್ಕ್ ಹೇಳಿದ್ದು, ಪೊಲೀಸರ ಆರೋಪಗಳನ್ನು ನಿರಾಕರಿಸಿದ್ದಾರೆ. “ಈ ವೇಳೆ ನಾನು ಸಂಭಾಲ್‌ನಲ್ಲಿಯೂ ಇರಲಿಲ್ಲ, ರಾಜ್ಯದಲ್ಲಿಯೂ ಇರಲಿಲ್ಲ. ಇದು ಪೊಲೀಸರು ಮತ್ತು ಆಡಳಿತದ ಪಿತೂರಿ.” ಎಂದು ಅವರು ಹಿಂಸಾಚಾರದ ನಂತರ ಹೇಳಿದ್ದರು.

ಮಸೀದಿ ಒಂದು ಐತಿಹಾಸಿಕ ಸ್ಥಳ ಎಂದು ಹೇಳುವ ಮೂಲಕ ಅವರು ನ್ಯಾಯಾಲಯದ ಆದೇಶದ ಸಮೀಕ್ಷೆಯನ್ನು ಟೀಕಿಸಿದ್ದರು. “1947 ರಲ್ಲಿ ಅಸ್ತಿತ್ವದಲ್ಲಿದ್ದ ಧಾರ್ಮಿಕ ಸ್ಥಳಗಳು ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ಮಸೀದಿಯು ಹಾಗೆಯೆ ಉಳಿಯಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು” ಎಂದು ಅವರು ಹೇಳಿದ್ದರು.

ಮಾರ್ಚ್ 25 ರಂದು, ಸಂಭಾಲ್ ಪೊಲೀಸರು ಈ ಗಲಭೆಯಲ್ಲಿ ಬಾರ್ಕ್ ಅವರ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನೋಟಿಸ್ ನೀಡಿದ್ದರು. ಅದರ ನಂತರ ಏಪ್ರಿಲ್‌ನಲ್ಲಿ ಅವರನ್ನು ಎಸ್‌ಐಟಿ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತಿ.

ಗುರುವಾರದಂದು ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್ ವಿಷ್ಣೋಯ್ ಬಾರ್ಕ್ ವಿರುದ್ಧ ಪ್ರಕರಣದಲ್ಲಿ ಆರೋಪ ಹೊರಿಸಲಾಗಿದೆ ಎಂದು ದೃಢಪಡಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ.

“ಶಾಹಿ ಜುಮಾ ಮಸೀದಿಯ ಅಧ್ಯಕ್ಷ ಜಾಫರ್ ಅಲಿ ಮತ್ತು ಬಾರ್ಕ್ ನಡುವೆ ತಡರಾತ್ರಿ ಸಂಭಾಷಣೆ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ. ವ್ಯಾಪಕ ಹಿಂಸಾಚಾರಕ್ಕೆ ಎರಡು ದಿನಗಳ ಮೊದಲು ನವೆಂಬರ್ 22 ರಂದು ಜನಸಮೂಹವನ್ನು ಒಟ್ಟುಗೂಡಿಸುವ ಜವಾಬ್ದಾರಿ ಅವರ ಮೇಲಿತ್ತು.” ಎಂದು ಅವರು ಹೇಳಿದ್ದಾರೆ.

ತನಿಖೆಯ ಸಮಯದಲ್ಲಿ ಸಂಗ್ರಹಿಸಿದ “ವ್ಯಾಪಕ ಸಾಕ್ಷ್ಯಗಳ” ಆಧಾರದ ಮೇಲೆ ಆರೋಪಪಟ್ಟಿ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜನವರಿ 3 ರಂದು, ಅಲಹಾಬಾದ್ ಹೈಕೋರ್ಟ್ ಬಾರ್ಕ್ ಬಂಧನವನ್ನು ತಡೆಹಿಡಿಯಿತು, ಆದರೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅವರ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಲು ನಿರಾಕರಿಸಿತು. ತನಿಖೆ ಮುಂದುವರಿಯುತ್ತದೆ ಎಂದು ನ್ಯಾಯಾಲಯ ತೀರ್ಪು ನೀಡಿತು ಮತ್ತು ಬಾರ್ಕ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಆದೇಶಿಸಿತು. ಸಂಭಾಲ್ ಹಿಂಸಾಚಾರ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...