Homeಮುಖಪುಟಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಸಂಭಾಲ್‌ನ ಸರ್ಕಲ್ ಆಫೀಸರ್ ಆಗಿದ್ದ ಮತ್ತು ಪ್ರಸ್ತುತ ಫಿರೋಝಾಬಾದ್‌ನಲ್ಲಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಗ್ರಾಮೀಣ) ಆಗಿ ನೇಮಕಗೊಂಡಿರುವ ಅನುಜ್ ಚೌಧರಿ ಮತ್ತು ಸಂಭಾಲ್ ಕೊತ್ವಾಲಿ ಚಂದೌಸಿಯ ಆಗಿನ ಸ್ಟೇಷನ್ ಹೌಸ್ ಆಫೀಸರ್ ಅನುಜ್ ತೋಮರ್ ಆರೋಪಿತರಲ್ಲಿ ಸೇರಿದ್ದಾರೆ. ಹಲವಾರು ಗುರುತಿಸಲಾಗದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಹಿಂದುತ್ವ ಗುಂಪುಗಳ ವಲಯದಲ್ಲಿ ಪ್ರಸಿದ್ಧ ಪೊಲೀಸ್ ಅಧಿಕಾರಿಯಾಗಿದ್ದ ಅನುಜ್ ಚೌಧರಿ, ಹಿಂಸಾಚಾರದ ನಂತರ ಹೋಳಿ ಆಚರಣೆಗೆ ಸಂಬಂಧಿಸಿದಂತೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು.

ಖಗ್ಗು ಸರೈ ಅಂಜುಮಾನ್ ಪ್ರದೇಶದ ನಿವಾಸಿ ಯಾಮೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಭಾಂಶು ಸುಧೀರ್ ಈ ಆದೇಶ ಹೊರಡಿಸಿದ್ದಾರೆ.

2024ರ ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿ ಪ್ರದೇಶದಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ನನ್ನ ಮಗ ಆಲಂ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು ಎಂದು ಯಾಮೀನ್ ಆರೋಪಿಸಿದ್ದರು. ಅರ್ಜಿಯ ಪ್ರಕಾರ, ಆಲಂ ರಸ್ಕ್ ಮತ್ತು ಬಿಸ್ಕತ್ತುಗಳನ್ನು ಮಾರಾಟ ಮಾಡಲು ತೆರಳಿದ್ದಾಗ ಗಲಭೆಯ ನಡುವೆ ಸಿಲುಕಿದ್ದರು. ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದರು.

ಪ್ರತ್ಯಕ್ಷದರ್ಶಿಗಳು ಮತ್ತು ಕುಟುಂಬಸ್ಥರ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ ಐವರು ಮುಸ್ಲಿಮರು ಸಾವನ್ನಪ್ಪಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

ಭಯದಿಂದ ನನ್ನ ಮಗ ತಲೆಮರೆಸಿಕೊಂಡು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾನೆ. ನಂತರ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾನೆ ಎಂದು ಯಾಮೀನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜನವರಿ 9ರಂದು ನಡೆದ ವಿಚಾರಣೆಯ ನಂತರ, ನ್ಯಾಯಾಲಯವು ಎಲ್ಲಾ ಹೆಸರಿಸಲಾದ ಮತ್ತು ಹೆಸರಿಸದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶಿಸಿದೆ.

ಮಂಗಳವಾರ ಸಂಜೆ ನ್ಯಾಯಾಲಯದ ನಿರ್ಧಾರದ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿದೆ. ತಡವಾಗಿ ಆದೇಶ ಹೊರಡಿಸಿದ್ದರಿಂದ ಅದರ ಲಿಖಿತ ಪ್ರತಿ ಇನ್ನೂ ಬಂದಿಲ್ಲ ಎಂದು ಯಾಮೀನ್ ಅವರ ವಕೀಲ ಚೌಧರಿ ಅಖ್ತರ್ ಹುಸೇನ್ ತಿಳಿಸಿರುವುದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ಶಾಹಿ ಜಾಮಾ ಮಸೀದಿ ಮೂಲತಃ ದೇವಸ್ಥಾನವಾಗಿತ್ತು ಎಂಬ ಸಿವಿಲ್ ಮೊಕದ್ದಮೆಯ ನಂತರ, ನ್ಯಾಯಾಲಯದ ಆದೇಶದ ಮೇರೆಗೆ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. 2024ರ ನವೆಂಬರ್ 19 ಮತ್ತು ನವೆಂಬರ್ 24 ರಂದು ಎರಡು ಹಂತಗಳಲ್ಲಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಯನ್ನು ನಡೆಸಲಾಗಿತ್ತು. ಈ ಸಮಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿತ್ತು. ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಭಾಲ್ ಕೊತ್ವಾಲಿ ಮತ್ತು ನಖಾಸಾ ಪೊಲೀಸ್ ಠಾಣೆಗಳಲ್ಲಿ ಪೊಲೀಸರು 12 ಪ್ರಕರಣಗಳನ್ನು ದಾಖಲಿಸಿದ್ದು, ಸಮಾಜವಾದಿ ಪಕ್ಷದ ಶಾಸಕ ಝಿಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅದೇ ಪಕ್ಷದ ಶಾಸಕ ಇಕ್ಬಾಲ್ ಮಹಮೂದ್ ಅವರ ಪುತ್ರ ಸುಹೈಲ್ ಇಕ್ಬಾಲ್ ಸೇರಿದಂತೆ ಹಲವಾರು ವ್ಯಕ್ತಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಶಾಹಿ ಜಾಮಾ ಮಸೀದಿ ಅಧ್ಯಕ್ಷ ಮತ್ತು ವಕೀಲ ಜಾಫರ್ ಅಲಿ ಸೇರಿದಂತೆ 134 ಆರೋಪಿಗಳನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಬಂಧಿತರಲ್ಲಿ ಮೂವರು ಮಹಿಳೆಯರು ಕೂಡ ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಶಾರಿಕ್ ಸಾಥಾ ಅವರ ಮೂವರು ಸಹಚರರಾದ ಮುಲ್ಲಾ ಅಫ್ರೋಝ್, ವಾರಿಸ್ ಮತ್ತು ಗುಲಾಮ್ ಅವರನ್ನೂ ಪೊಲೀಸರು ಜೈಲಿಗೆ ತಳ್ಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜಾಫರ್ ಅಲಿಯನ್ನು ಆಗಸ್ಟ್ 2024ರಲ್ಲಿ ಮೊರಾದಾಬಾದ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಗಲಭೆಯ ಸಮಯದಲ್ಲಿ ಪೊಲೀಸರಿಂದ ನಡೆದ ಹತ್ಯೆಗಳಲ್ಲಿ ನ್ಯಾಯ ದೊರಕಿಸುವ ಸಲುವಾಗಿ ಕಾನೂನು ಹೋರಾಟ ನಡೆಸಲು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್‌) ಸಹಾಯ ಮಾಡಿದೆ. ಎಪಿಸಿಆರ್‌ನ ನದೀಮ್ ಖಾನ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ. ಹೆಚ್ಚಿನ ಕುಟುಂಬಗಳು ಪೊಲೀಸ್ ಹಿಂಸಾಚಾರದ ಬಗ್ಗೆ ಹೇಳಿಕೊಳ್ಳುವ ಸಲುವಾಗಿ ಮುಂದೆ ಬರಲು ಈ ಆದೇಶ ಅನುಕೂಲ ಮಾಡಿಕೊಡಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...