Homeಮುಖಪುಟಸಂಭಾಲ್ ಹಿಂಸಾಚಾರ ಕುರಿತ ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

ಸಂಭಾಲ್ ಹಿಂಸಾಚಾರ ಕುರಿತ ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು ಮಂಗಳವಾರ ಸದನದಿಂದ ಸಂಕ್ಷಿಪ್ತವಾಗಿ ಹೊರನಡೆದಿವೆ. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಸಭೆ ಸೇರಿದ ತಕ್ಷಣ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಎದ್ದುನಿಂತು ವಿಷಯ ಪ್ರಸ್ತಾಪಿಸಿ, ವಿಷಯದ ಬಗ್ಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರ ಅನುಮತಿ ಕೋರಿದರು. ಸಂಭಾಲ್ ಹಿಂಸಾಚಾರ

“ಇದು ತುಂಬಾ ಗಂಭೀರವಾದ ವಿಷಯ. ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಖಿಲೇಶ್ ಯಾದವ್ ಹೇಳಿದರು. ಆದರೆ, ಇದಕ್ಕೆ ಅನುಮತಿ ನೀಡದ ಸ್ಪೀಕರ್‌, ಶೂನ್ಯವೇಳೆಯಲ್ಲಿ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ಹೇಳಿದರು. ಇದನ್ನು ಪ್ರತಿಭಟಿಸಿದ ಅಖಿಲೇಶ್ ಯಾದವ್ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ಸದನದಿಂದ ಹೊರನಡೆಯಲು ಪ್ರಾರಂಭಿಸಿದರು. ಅದೇ ವೇಳೆ ಕೆಲ ಎಸ್ಪಿ ಸದಸ್ಯರು, ಘೋಷಣೆಗಳನ್ನು ಕೂಗುತ್ತಾ ಬಾವಿಯತ್ತ ಧಾವಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಸ್‌ಪಿ ಸದಸ್ಯರು ಬಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಡಿಎಂಕೆ ಸದಸ್ಯ ಎ. ರಾಜಾ ಅವರು ಕಾಂಗ್ರೆಸ್ ಸೇರಿದಂತೆ ಇತರ ಪ್ರತಿಪಕ್ಷಗಳ ಸದಸ್ಯರಿಗೆ ತಮ್ಮ ಸೀಟಿನಿಂದ ಎದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದರು. ಈ ವೇಳೆ ಎನ್‌ಸಿಪಿ ಮತ್ತು ಶಿವಸೇನೆ-ಯುಬಿಟಿ ಸದಸ್ಯರು ಎಸ್‌ಪಿ ಸಂಸದರ ಬೆಂಬಲಕ್ಕೆ ನಿಂತರು. ಕೆಲ ಕಾಂಗ್ರೆಸ್‌ ಸದಸ್ಯರ ಜೊತೆಗೆ ರಾಹುಲ್ ಗಾಂಧಿ ಕೂಡಾ ಧರಣಿಗೆ ಸೇರಿದರು. ಸಂಭಾಲ್ ಹಿಂಸಾಚಾರ

ಪ್ರತಿಭಟನೆ ನಡೆಯುತ್ತಿರುವಾಗಲೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಸ್ವಲ್ಪ ಸಮಯದ ನಂತರ, ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಸಂಸದರೊಂದಿಗೆ ಸದನ ತೊರೆಯುವಂತೆ ಕೇಳಿಕೊಂಡಿದ್ದು, ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ನಂತರ ನಡೆಯುತ್ತಿರುವ ಪ್ರಶ್ನೋತ್ತರ ವೇಳೆಯಲ್ಲಿ ಭಾಗವಹಿಸಲು ಸಂಸದರು ಮತ್ತೆ ಹಿಂತಿರುಗಿದರು.

ಪ್ರಶ್ನೋತ್ತರ ಅವಧಿಯ ಕೊನೆಯಲ್ಲಿ, ಪಿಎಂ-ಕಿಸಾನ್ ಯೋಜನೆ ಕುರಿತ ಪ್ರಶ್ನೆಗೆ ಉತ್ತರವಾಗಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೀಡಿದ ಉತ್ತರದ ಮೇಲೆ ಕೆಲವು ವಿರೋಧ ಪಕ್ಷದ ಸದಸ್ಯರು ಮತ್ತೆ ಸಭಾತ್ಯಾಗ ಮಾಡಿದರು.

ಇದನ್ನೂ ಓದಿ: ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...