Homeಮುಖಪುಟಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ 'ಕಲ್ಲು ತೂರಾಟಗಾರರ' ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

ಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಸಂಗ್ರಹಿಸಲು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ಗಳನ್ನು ಪ್ರದರ್ಶಿಸಿಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಭಾನುವಾರ (ನ24) ಸಂಭಾಲ್‌ನ ಕೋಟ್ ಗಾರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಮಸೀದಿಯ ಸ್ಥಳದಲ್ಲಿ ಈ ಹಿಂದೆ ಹರಿಹರ ದೇವಾಲಯ ಇತ್ತು ಎಂಬ ಅರ್ಜಿಯ ನಂತರ ಸಮೀಕ್ಷೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು.

“ಸಂಭಾಲ್‌ನಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಳ್ಳುತ್ತಿದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುತ್ತದೆ. ಅವರಿಂದಲೇ ಹಾನಿಯ ಪಾವತಿಗೆ ಪ್ರಯತ್ನಿಸಲಾಗುತ್ತದೆ. ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಬಹುಮಾನವನ್ನೂ ನೀಡಲಾಗುತ್ತದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.

ಈ ಹಿಂದೆ 2020ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆದಾಗ, ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆಗಳಲ್ಲಿ ಪ್ರತಿಭಟನಾಕಾರರ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿತ್ತು. ನಂತರ ನ್ಯಾಯಾಲಯದ ಆದೇಶದ ಹಿನ್ನೆಲೆ ಅವುಗಳನ್ನು ತೆರವುಗೊಳಿಸಲಾಗಿತ್ತು.

ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಇದುವರೆಗೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದು, ಏಳು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಝಿಯಾ-ಉರ್-ರೆಹಮಾನ್ ಬಾರ್ಕ್, ಪಕ್ಷದ ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೇಲ್ ಇಕ್ಬಾಲ್ ಸೇರಿದಂತೆ 2,750 ಕ್ಕೂ ಹೆಚ್ಚು ಅಪರಿಚಿತ ಶಂಕಿತರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಯುತ್ತಿದೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಸೋಮವಾರ ಹೇಳಿದ್ದಾರೆ. “ಅಶಾಂತಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...