Homeಮುಖಪುಟಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ 'ಕಲ್ಲು ತೂರಾಟಗಾರರ' ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

ಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಸಂಗ್ರಹಿಸಲು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ಗಳನ್ನು ಪ್ರದರ್ಶಿಸಿಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಭಾನುವಾರ (ನ24) ಸಂಭಾಲ್‌ನ ಕೋಟ್ ಗಾರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಮಸೀದಿಯ ಸ್ಥಳದಲ್ಲಿ ಈ ಹಿಂದೆ ಹರಿಹರ ದೇವಾಲಯ ಇತ್ತು ಎಂಬ ಅರ್ಜಿಯ ನಂತರ ಸಮೀಕ್ಷೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು.

“ಸಂಭಾಲ್‌ನಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಳ್ಳುತ್ತಿದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುತ್ತದೆ. ಅವರಿಂದಲೇ ಹಾನಿಯ ಪಾವತಿಗೆ ಪ್ರಯತ್ನಿಸಲಾಗುತ್ತದೆ. ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಬಹುಮಾನವನ್ನೂ ನೀಡಲಾಗುತ್ತದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.

ಈ ಹಿಂದೆ 2020ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆದಾಗ, ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆಗಳಲ್ಲಿ ಪ್ರತಿಭಟನಾಕಾರರ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿತ್ತು. ನಂತರ ನ್ಯಾಯಾಲಯದ ಆದೇಶದ ಹಿನ್ನೆಲೆ ಅವುಗಳನ್ನು ತೆರವುಗೊಳಿಸಲಾಗಿತ್ತು.

ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಇದುವರೆಗೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದು, ಏಳು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಝಿಯಾ-ಉರ್-ರೆಹಮಾನ್ ಬಾರ್ಕ್, ಪಕ್ಷದ ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೇಲ್ ಇಕ್ಬಾಲ್ ಸೇರಿದಂತೆ 2,750 ಕ್ಕೂ ಹೆಚ್ಚು ಅಪರಿಚಿತ ಶಂಕಿತರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಯುತ್ತಿದೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಸೋಮವಾರ ಹೇಳಿದ್ದಾರೆ. “ಅಶಾಂತಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...