Homeಮುಖಪುಟಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ 'ಕಲ್ಲು ತೂರಾಟಗಾರರ' ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

ಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಸಂಗ್ರಹಿಸಲು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ಗಳನ್ನು ಪ್ರದರ್ಶಿಸಿಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಭಾನುವಾರ (ನ24) ಸಂಭಾಲ್‌ನ ಕೋಟ್ ಗಾರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಮಸೀದಿಯ ಸ್ಥಳದಲ್ಲಿ ಈ ಹಿಂದೆ ಹರಿಹರ ದೇವಾಲಯ ಇತ್ತು ಎಂಬ ಅರ್ಜಿಯ ನಂತರ ಸಮೀಕ್ಷೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು.

“ಸಂಭಾಲ್‌ನಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಳ್ಳುತ್ತಿದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುತ್ತದೆ. ಅವರಿಂದಲೇ ಹಾನಿಯ ಪಾವತಿಗೆ ಪ್ರಯತ್ನಿಸಲಾಗುತ್ತದೆ. ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಬಹುಮಾನವನ್ನೂ ನೀಡಲಾಗುತ್ತದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.

ಈ ಹಿಂದೆ 2020ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆದಾಗ, ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆಗಳಲ್ಲಿ ಪ್ರತಿಭಟನಾಕಾರರ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿತ್ತು. ನಂತರ ನ್ಯಾಯಾಲಯದ ಆದೇಶದ ಹಿನ್ನೆಲೆ ಅವುಗಳನ್ನು ತೆರವುಗೊಳಿಸಲಾಗಿತ್ತು.

ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಇದುವರೆಗೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದು, ಏಳು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಝಿಯಾ-ಉರ್-ರೆಹಮಾನ್ ಬಾರ್ಕ್, ಪಕ್ಷದ ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೇಲ್ ಇಕ್ಬಾಲ್ ಸೇರಿದಂತೆ 2,750 ಕ್ಕೂ ಹೆಚ್ಚು ಅಪರಿಚಿತ ಶಂಕಿತರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಯುತ್ತಿದೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಸೋಮವಾರ ಹೇಳಿದ್ದಾರೆ. “ಅಶಾಂತಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...