Homeಕರ್ನಾಟಕರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

- Advertisement -
- Advertisement -

ನೂತನ ಪಠ್ಯ ಪರಿಷ್ಕರಣೆ ರಗಳೆಗಳು ಸದ್ಯಕ್ಕೆ ನಿಲ್ಲುವ ಸೂಚನೆ ಕಂಡುಬರುತ್ತಿಲ್ಲ. ತರಾತುರಿಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಹಲವಾರು ತಪ್ಪುಗಳು ಎದ್ದು ಕಾಣುತ್ತಿವೆ. ಇದೀಗ ರೋಹಿತ್ ಚಕ್ರತೀರ್ಥ ಸಮಿತಿಯು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿಗಳೆರಡಲ್ಲಿಯೂ ಸೇರಿಸಿ ಎಡವಟ್ಟು ಮಾಡಿಕೊಂಡಿದೆ.

ಬಿ.ಎಂ ಶರ್ಮಾರವರು ಬರೆದ ‘ಬಾವಿಯಲ್ಲಿ ಚಂದ್ರ’ ಪ್ರಸಿದ್ದ ಮಕ್ಕಳ ಪದ್ಯ. ಅದನ್ನು ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿಯು 3 ನೇ ತರಗತಿ ನಲಿಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ನೂತನ ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಅದನ್ನು ಹಾಗೆ ಉಳಿಸಿಕೊಂಡಿದ್ದಲ್ಲದೆ 4ನೇ ತರಗತಿಯ ಸವಿಕನ್ನಡ ಪುಸ್ತಕದಲ್ಲಿಯೂ ಅದೇ ಪದ್ಯವನ್ನು ಸೇರಿಸಿದೆ. ಆ ಮೂಲಕ ಮಕ್ಕಳು 3 ಮತ್ತು 4 ನೇ ಎರಡೂ ತರಗತಿಗಳಲ್ಲಿಯೂ ಒಂದೇ ಪದ್ಯ ಕಲಿಯಬೇಕಾದ ದುಸ್ಥಿತಿ ಒದಗಿದೆ!

ಪಠ್ಯ ಪರಿಷ್ಕರಣೆ ಎಂಬುದು ಮಹತ್ವದ ಕೆಲಸ. ಒಂದೀಡಿ ಪೀಳಿಕೆಯನ್ನು ತಯಾರಿಸುವ ಕೆಲಸ. ಅದನ್ನು ತಜ್ಞರು, ಅನುಭವಿಗಳು ನಿರ್ವಹಿಸಬೇಕು. ಆದರೆ ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥನಂತವರು ಅದನ್ನು ನಿಭಾಯಿಸಲು ಹೋಗಿ ಭಾರೀ ಅನಾಹುತ ಸೃಷ್ಟಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಇಂಬುಕೊಡುವಂತೆ ಎಡವಟ್ಟುಗಳು ಕಾಣಸಿಗುತ್ತಿವೆ.

ಇದನ್ನೂ ಓದಿ: ‘ಸಂಸ್ಕೃತಿ ಇಲ್ಲದವರು ಕಾಡುಜನರಂತೆ ಇರುವರು’: ಪರಿಷ್ಕೃತ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಪಾಠ ಸಂಪೂರ್ಣ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲ್ಕನೇ ತರಗತಿಯ ಪಠ್ಯದಲ್ಲಿರುವ ಈ ಪದ್ಯದಲ್ಲಿ ಮೊದಲನೇ ಶಬ್ದ ತಪ್ಪಾಗಿದೆ: ತಿಂಗಳು ಬೆಳಕಿನ ಎಂದಿದೆ, ಇದು ತಿಂಗಳ ಬೆಳಕಿನ ಎಂದಿರಬೇಕಿತ್ತು. ನಾನು ನಾಲ್ಕನೇ ತರಗತಿ ಕಲಿತಾಗಲೂ ಈ ಪದ್ಯ ಇತ್ತು. ಆಗಲೂ ತಿಂಗಳ ಅಂತಲೇ ಇತ್ತು, ಈಗಿನ 3ನೇ ತರಗತಿ ಪಠ್ಯದಲ್ಲಿ ಸರಿಯಾಗಿದೆ.

  2. ಇಂಥಾ ಎಡವಟ್ಟುಗಳು ಹೊಸದೇನಲ್ಲ.
    ನಾವು ನಾಲ್ಕನೇ ತರಗತಿಯಲ್ಲಿದ್ದಾಗ ಇದ್ದ “ಮೂಡುವನು ರವಿ ಮೂಡುವನು” ಪದ್ಯ ಮತ್ತೆ ಆರನೇ ತರಗತಿಗೆ ಬಂದಾಗಲೂ ಇತ್ತು.
    ಹಿಂದಿಯಲ್ಲೂ ಇಂಥಹ ಒಂದು ಎಡವಟ್ಟು ನಡೆದಿದ್ದು ನಾವು ಸಾಮಾನ್ಯ ಎಂದೇ ಭಾವಿಸಿ ಎರಡೆರಡು ಸಲ ಓದಿ ಬರೆದು ಮಾಡಿದ್ದೆವು.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...