Homeಕರ್ನಾಟಕರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

- Advertisement -
- Advertisement -

ನೂತನ ಪಠ್ಯ ಪರಿಷ್ಕರಣೆ ರಗಳೆಗಳು ಸದ್ಯಕ್ಕೆ ನಿಲ್ಲುವ ಸೂಚನೆ ಕಂಡುಬರುತ್ತಿಲ್ಲ. ತರಾತುರಿಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಹಲವಾರು ತಪ್ಪುಗಳು ಎದ್ದು ಕಾಣುತ್ತಿವೆ. ಇದೀಗ ರೋಹಿತ್ ಚಕ್ರತೀರ್ಥ ಸಮಿತಿಯು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿಗಳೆರಡಲ್ಲಿಯೂ ಸೇರಿಸಿ ಎಡವಟ್ಟು ಮಾಡಿಕೊಂಡಿದೆ.

ಬಿ.ಎಂ ಶರ್ಮಾರವರು ಬರೆದ ‘ಬಾವಿಯಲ್ಲಿ ಚಂದ್ರ’ ಪ್ರಸಿದ್ದ ಮಕ್ಕಳ ಪದ್ಯ. ಅದನ್ನು ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿಯು 3 ನೇ ತರಗತಿ ನಲಿಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ನೂತನ ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಅದನ್ನು ಹಾಗೆ ಉಳಿಸಿಕೊಂಡಿದ್ದಲ್ಲದೆ 4ನೇ ತರಗತಿಯ ಸವಿಕನ್ನಡ ಪುಸ್ತಕದಲ್ಲಿಯೂ ಅದೇ ಪದ್ಯವನ್ನು ಸೇರಿಸಿದೆ. ಆ ಮೂಲಕ ಮಕ್ಕಳು 3 ಮತ್ತು 4 ನೇ ಎರಡೂ ತರಗತಿಗಳಲ್ಲಿಯೂ ಒಂದೇ ಪದ್ಯ ಕಲಿಯಬೇಕಾದ ದುಸ್ಥಿತಿ ಒದಗಿದೆ!

ಪಠ್ಯ ಪರಿಷ್ಕರಣೆ ಎಂಬುದು ಮಹತ್ವದ ಕೆಲಸ. ಒಂದೀಡಿ ಪೀಳಿಕೆಯನ್ನು ತಯಾರಿಸುವ ಕೆಲಸ. ಅದನ್ನು ತಜ್ಞರು, ಅನುಭವಿಗಳು ನಿರ್ವಹಿಸಬೇಕು. ಆದರೆ ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥನಂತವರು ಅದನ್ನು ನಿಭಾಯಿಸಲು ಹೋಗಿ ಭಾರೀ ಅನಾಹುತ ಸೃಷ್ಟಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಇಂಬುಕೊಡುವಂತೆ ಎಡವಟ್ಟುಗಳು ಕಾಣಸಿಗುತ್ತಿವೆ.

ಇದನ್ನೂ ಓದಿ: ‘ಸಂಸ್ಕೃತಿ ಇಲ್ಲದವರು ಕಾಡುಜನರಂತೆ ಇರುವರು’: ಪರಿಷ್ಕೃತ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಪಾಠ ಸಂಪೂರ್ಣ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲ್ಕನೇ ತರಗತಿಯ ಪಠ್ಯದಲ್ಲಿರುವ ಈ ಪದ್ಯದಲ್ಲಿ ಮೊದಲನೇ ಶಬ್ದ ತಪ್ಪಾಗಿದೆ: ತಿಂಗಳು ಬೆಳಕಿನ ಎಂದಿದೆ, ಇದು ತಿಂಗಳ ಬೆಳಕಿನ ಎಂದಿರಬೇಕಿತ್ತು. ನಾನು ನಾಲ್ಕನೇ ತರಗತಿ ಕಲಿತಾಗಲೂ ಈ ಪದ್ಯ ಇತ್ತು. ಆಗಲೂ ತಿಂಗಳ ಅಂತಲೇ ಇತ್ತು, ಈಗಿನ 3ನೇ ತರಗತಿ ಪಠ್ಯದಲ್ಲಿ ಸರಿಯಾಗಿದೆ.

  2. ಇಂಥಾ ಎಡವಟ್ಟುಗಳು ಹೊಸದೇನಲ್ಲ.
    ನಾವು ನಾಲ್ಕನೇ ತರಗತಿಯಲ್ಲಿದ್ದಾಗ ಇದ್ದ “ಮೂಡುವನು ರವಿ ಮೂಡುವನು” ಪದ್ಯ ಮತ್ತೆ ಆರನೇ ತರಗತಿಗೆ ಬಂದಾಗಲೂ ಇತ್ತು.
    ಹಿಂದಿಯಲ್ಲೂ ಇಂಥಹ ಒಂದು ಎಡವಟ್ಟು ನಡೆದಿದ್ದು ನಾವು ಸಾಮಾನ್ಯ ಎಂದೇ ಭಾವಿಸಿ ಎರಡೆರಡು ಸಲ ಓದಿ ಬರೆದು ಮಾಡಿದ್ದೆವು.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...