Homeಕರ್ನಾಟಕರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

- Advertisement -
- Advertisement -

ನೂತನ ಪಠ್ಯ ಪರಿಷ್ಕರಣೆ ರಗಳೆಗಳು ಸದ್ಯಕ್ಕೆ ನಿಲ್ಲುವ ಸೂಚನೆ ಕಂಡುಬರುತ್ತಿಲ್ಲ. ತರಾತುರಿಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಹಲವಾರು ತಪ್ಪುಗಳು ಎದ್ದು ಕಾಣುತ್ತಿವೆ. ಇದೀಗ ರೋಹಿತ್ ಚಕ್ರತೀರ್ಥ ಸಮಿತಿಯು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿಗಳೆರಡಲ್ಲಿಯೂ ಸೇರಿಸಿ ಎಡವಟ್ಟು ಮಾಡಿಕೊಂಡಿದೆ.

ಬಿ.ಎಂ ಶರ್ಮಾರವರು ಬರೆದ ‘ಬಾವಿಯಲ್ಲಿ ಚಂದ್ರ’ ಪ್ರಸಿದ್ದ ಮಕ್ಕಳ ಪದ್ಯ. ಅದನ್ನು ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿಯು 3 ನೇ ತರಗತಿ ನಲಿಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ನೂತನ ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಅದನ್ನು ಹಾಗೆ ಉಳಿಸಿಕೊಂಡಿದ್ದಲ್ಲದೆ 4ನೇ ತರಗತಿಯ ಸವಿಕನ್ನಡ ಪುಸ್ತಕದಲ್ಲಿಯೂ ಅದೇ ಪದ್ಯವನ್ನು ಸೇರಿಸಿದೆ. ಆ ಮೂಲಕ ಮಕ್ಕಳು 3 ಮತ್ತು 4 ನೇ ಎರಡೂ ತರಗತಿಗಳಲ್ಲಿಯೂ ಒಂದೇ ಪದ್ಯ ಕಲಿಯಬೇಕಾದ ದುಸ್ಥಿತಿ ಒದಗಿದೆ!

ಪಠ್ಯ ಪರಿಷ್ಕರಣೆ ಎಂಬುದು ಮಹತ್ವದ ಕೆಲಸ. ಒಂದೀಡಿ ಪೀಳಿಕೆಯನ್ನು ತಯಾರಿಸುವ ಕೆಲಸ. ಅದನ್ನು ತಜ್ಞರು, ಅನುಭವಿಗಳು ನಿರ್ವಹಿಸಬೇಕು. ಆದರೆ ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥನಂತವರು ಅದನ್ನು ನಿಭಾಯಿಸಲು ಹೋಗಿ ಭಾರೀ ಅನಾಹುತ ಸೃಷ್ಟಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಇಂಬುಕೊಡುವಂತೆ ಎಡವಟ್ಟುಗಳು ಕಾಣಸಿಗುತ್ತಿವೆ.

ಇದನ್ನೂ ಓದಿ: ‘ಸಂಸ್ಕೃತಿ ಇಲ್ಲದವರು ಕಾಡುಜನರಂತೆ ಇರುವರು’: ಪರಿಷ್ಕೃತ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಪಾಠ ಸಂಪೂರ್ಣ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲ್ಕನೇ ತರಗತಿಯ ಪಠ್ಯದಲ್ಲಿರುವ ಈ ಪದ್ಯದಲ್ಲಿ ಮೊದಲನೇ ಶಬ್ದ ತಪ್ಪಾಗಿದೆ: ತಿಂಗಳು ಬೆಳಕಿನ ಎಂದಿದೆ, ಇದು ತಿಂಗಳ ಬೆಳಕಿನ ಎಂದಿರಬೇಕಿತ್ತು. ನಾನು ನಾಲ್ಕನೇ ತರಗತಿ ಕಲಿತಾಗಲೂ ಈ ಪದ್ಯ ಇತ್ತು. ಆಗಲೂ ತಿಂಗಳ ಅಂತಲೇ ಇತ್ತು, ಈಗಿನ 3ನೇ ತರಗತಿ ಪಠ್ಯದಲ್ಲಿ ಸರಿಯಾಗಿದೆ.

  2. ಇಂಥಾ ಎಡವಟ್ಟುಗಳು ಹೊಸದೇನಲ್ಲ.
    ನಾವು ನಾಲ್ಕನೇ ತರಗತಿಯಲ್ಲಿದ್ದಾಗ ಇದ್ದ “ಮೂಡುವನು ರವಿ ಮೂಡುವನು” ಪದ್ಯ ಮತ್ತೆ ಆರನೇ ತರಗತಿಗೆ ಬಂದಾಗಲೂ ಇತ್ತು.
    ಹಿಂದಿಯಲ್ಲೂ ಇಂಥಹ ಒಂದು ಎಡವಟ್ಟು ನಡೆದಿದ್ದು ನಾವು ಸಾಮಾನ್ಯ ಎಂದೇ ಭಾವಿಸಿ ಎರಡೆರಡು ಸಲ ಓದಿ ಬರೆದು ಮಾಡಿದ್ದೆವು.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...