Homeಕರ್ನಾಟಕರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

- Advertisement -
- Advertisement -

ನೂತನ ಪಠ್ಯ ಪರಿಷ್ಕರಣೆ ರಗಳೆಗಳು ಸದ್ಯಕ್ಕೆ ನಿಲ್ಲುವ ಸೂಚನೆ ಕಂಡುಬರುತ್ತಿಲ್ಲ. ತರಾತುರಿಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಹಲವಾರು ತಪ್ಪುಗಳು ಎದ್ದು ಕಾಣುತ್ತಿವೆ. ಇದೀಗ ರೋಹಿತ್ ಚಕ್ರತೀರ್ಥ ಸಮಿತಿಯು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿಗಳೆರಡಲ್ಲಿಯೂ ಸೇರಿಸಿ ಎಡವಟ್ಟು ಮಾಡಿಕೊಂಡಿದೆ.

ಬಿ.ಎಂ ಶರ್ಮಾರವರು ಬರೆದ ‘ಬಾವಿಯಲ್ಲಿ ಚಂದ್ರ’ ಪ್ರಸಿದ್ದ ಮಕ್ಕಳ ಪದ್ಯ. ಅದನ್ನು ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿಯು 3 ನೇ ತರಗತಿ ನಲಿಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ನೂತನ ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಅದನ್ನು ಹಾಗೆ ಉಳಿಸಿಕೊಂಡಿದ್ದಲ್ಲದೆ 4ನೇ ತರಗತಿಯ ಸವಿಕನ್ನಡ ಪುಸ್ತಕದಲ್ಲಿಯೂ ಅದೇ ಪದ್ಯವನ್ನು ಸೇರಿಸಿದೆ. ಆ ಮೂಲಕ ಮಕ್ಕಳು 3 ಮತ್ತು 4 ನೇ ಎರಡೂ ತರಗತಿಗಳಲ್ಲಿಯೂ ಒಂದೇ ಪದ್ಯ ಕಲಿಯಬೇಕಾದ ದುಸ್ಥಿತಿ ಒದಗಿದೆ!

ಪಠ್ಯ ಪರಿಷ್ಕರಣೆ ಎಂಬುದು ಮಹತ್ವದ ಕೆಲಸ. ಒಂದೀಡಿ ಪೀಳಿಕೆಯನ್ನು ತಯಾರಿಸುವ ಕೆಲಸ. ಅದನ್ನು ತಜ್ಞರು, ಅನುಭವಿಗಳು ನಿರ್ವಹಿಸಬೇಕು. ಆದರೆ ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥನಂತವರು ಅದನ್ನು ನಿಭಾಯಿಸಲು ಹೋಗಿ ಭಾರೀ ಅನಾಹುತ ಸೃಷ್ಟಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಇಂಬುಕೊಡುವಂತೆ ಎಡವಟ್ಟುಗಳು ಕಾಣಸಿಗುತ್ತಿವೆ.

ಇದನ್ನೂ ಓದಿ: ‘ಸಂಸ್ಕೃತಿ ಇಲ್ಲದವರು ಕಾಡುಜನರಂತೆ ಇರುವರು’: ಪರಿಷ್ಕೃತ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಪಾಠ ಸಂಪೂರ್ಣ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲ್ಕನೇ ತರಗತಿಯ ಪಠ್ಯದಲ್ಲಿರುವ ಈ ಪದ್ಯದಲ್ಲಿ ಮೊದಲನೇ ಶಬ್ದ ತಪ್ಪಾಗಿದೆ: ತಿಂಗಳು ಬೆಳಕಿನ ಎಂದಿದೆ, ಇದು ತಿಂಗಳ ಬೆಳಕಿನ ಎಂದಿರಬೇಕಿತ್ತು. ನಾನು ನಾಲ್ಕನೇ ತರಗತಿ ಕಲಿತಾಗಲೂ ಈ ಪದ್ಯ ಇತ್ತು. ಆಗಲೂ ತಿಂಗಳ ಅಂತಲೇ ಇತ್ತು, ಈಗಿನ 3ನೇ ತರಗತಿ ಪಠ್ಯದಲ್ಲಿ ಸರಿಯಾಗಿದೆ.

  2. ಇಂಥಾ ಎಡವಟ್ಟುಗಳು ಹೊಸದೇನಲ್ಲ.
    ನಾವು ನಾಲ್ಕನೇ ತರಗತಿಯಲ್ಲಿದ್ದಾಗ ಇದ್ದ “ಮೂಡುವನು ರವಿ ಮೂಡುವನು” ಪದ್ಯ ಮತ್ತೆ ಆರನೇ ತರಗತಿಗೆ ಬಂದಾಗಲೂ ಇತ್ತು.
    ಹಿಂದಿಯಲ್ಲೂ ಇಂಥಹ ಒಂದು ಎಡವಟ್ಟು ನಡೆದಿದ್ದು ನಾವು ಸಾಮಾನ್ಯ ಎಂದೇ ಭಾವಿಸಿ ಎರಡೆರಡು ಸಲ ಓದಿ ಬರೆದು ಮಾಡಿದ್ದೆವು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...