Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...