Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...