Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...