Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...