Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...