Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...