Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...