Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...