Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...