Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...