Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...