Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...