Homeಮುಖಪುಟಸಲಿಂಗ ವಿವಾಹ: ಸುಪ್ರೀಂ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಕೆ

ಸಲಿಂಗ ವಿವಾಹ: ಸುಪ್ರೀಂ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಕೆ

- Advertisement -
- Advertisement -

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನಿರಾಕರಿಸುವ ಅಕ್ಟೋಬರ್ 17 ರ ಸುಪ್ರೀಂ ಕೋರ್ಟ್‌ನ ತೀರ್ಪು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಂದಿನ ಅರ್ಜಿದಾರರಲ್ಲಿ ಒಬ್ಬರಾದ ಉದಿತ್ ಸೂದ್ ಅವರು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು.

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿತು,

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಅದನ್ನು ಸಂಸತ್ತು ಮಾಡಬೇಕೆಂದು ಹೇಳಿದೆ. ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ”ನ್ಯಾಯಾಲಯವು ಕಾನೂನುಗಳನ್ನು ಮಾಡುವುದಿಲ್ಲ ಬದಲಿಗೆ ಅವುಗಳನ್ನು ವ್ಯಾಖ್ಯಾನಿಸುತ್ತದೆ. ಕೇವಲ ಸಂಸತ್ತು ಮಾತ್ರ ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ತರಬಹುದು. ಆದರೆ ಈ ಎಲ್‌ಜಿಬಿಟಿಕ್ಯೂ ಸಮುದಾಯ ತಮ್ಮ ಬದುಕು ಸಾಗಿಸುವಲ್ಲಿ ಯಾವುದೇ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳದ್ದು” ಎಂದು ಸೂಚಿಸಿದರು.

”ವಿಶೇಷ ವಿವಾಹ ಕಾಯ್ದೆ(SMA) ವಿಷಯವನ್ನು ಸಂಸತ್ತು ನಿರ್ಧರಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 ಅನ್ನು ರದ್ದುಪಡಿಸಿದರೆ ಪ್ರಗತಿಪರ ಶಾಸನದ ಪ್ರಯೋಜನಗಳನ್ನು ಕಳೆದುಕೊಳ್ಳಬೇಕಾಗುವ ಅಪಾಯವೂ ಇದೆ. ಇದು ದೇಶವನ್ನು ಸ್ವಾತಂತ್ರ್ಯ ಪೂರ್ವ ಯುಗಕ್ಕೆ ಕೊಂಡೊಯ್ಯಲಿದೆ. ಭಾರತೀಯ ಉತ್ತರಾಧಿಕಾರ ಕಾಯ್ದೆ ಅಥವಾ ಹಿಂದೂ ಉತ್ತರಾಧಿಕಾರ ಕಾಯ್ದೆಯನ್ನು ಒಮ್ಮೆ ಗಮನಿಸಿದರೆ ಈ ಪ್ರಕರಣವು ಶಾಸಕಾಂಗ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ ಎಂಬುದು ಸ್ಪಷ್ಟ” ಎಂದು ಸಿಜೆಐ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮೇ 11ರಂದು ತೀರ್ಪು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರಿದ್ದ ಪಂಚಪೀಠವು ಈ ತೀರ್ಪು ನೀಡಿದೆ.

ಸಲಿಂಗಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ಸಲಿಂಗಿ ದಂಪತಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಕೋರ್ಟ್​ ಏಪ್ರಿಲ್ 18ರಿಂದ ಆರಂಭಿಸಿತ್ತು.

ತೀರ್ಪಿನಲ್ಲಿ ಉಲ್ಲೇಖಿಸಿದ ಪ್ರಮುಖ ಅಂಶಗಳು:

  1. ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನ ಕ್ರಮವನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗ
  2. ಮದುವೆಯು ಸ್ಥಿರ ಮತ್ತು ಬದಲಾಗದ ಸಂಸ್ಥೆ ಎಂದು ಹೇಳುವುದು ತಪ್ಪು
  3. ಎಲ್‌ಜಿಬಿಟಿ ಸಮುದಾಯದ ವ್ಯಕ್ತಿಗಳು ಸೇರಿದಂತೆ ಎಲ್ಲ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ.
  4. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವ ಸಾಮರ್ಥ್ಯವಾಗಿದೆ
  5. ಕ್ವೀರ್ ಸಮುದಾಯಕ್ಕೆ ಯಾವುದೇ ಸೇವೆ, ಸವಲತ್ತು ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ

ಇದನ್ನೂ ಓದಿ: ಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...