Homeಕರ್ನಾಟಕಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಯೂಟ್ಯೂಬರ್ ಸಮೀರ್ ಎಂಡಿ ಅವರಿಗೆ ಬುಧವಾರ ತಡ ರಾತ್ರಿ ಪೊಲೀಸರು ಅವರ ಮನೆ ಪ್ರವೇಶಿಸಿ ಬಂಧಿಸಲು ಪ್ರಯತ್ನಿಸಿದ್ದು, ನಂತರ ನೋಟಿಸ್ ನೀಡಿರುವುದು ವರದಿಯಾಗಿದೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ  ಖಚಿತಪಡಿಸಿದ್ದಾರೆ. ಸೌಜನ್ಯ ಪರ ಧ್ವನಿಯೆತ್ತಿದ

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶವು ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದೆ. ಪರ ಧ್ವನಿಯೆತ್ತಿದ

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ತಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದು, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...