Homeಕರ್ನಾಟಕಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಯೂಟ್ಯೂಬರ್ ಸಮೀರ್ ಎಂಡಿ ಅವರಿಗೆ ಬುಧವಾರ ತಡ ರಾತ್ರಿ ಪೊಲೀಸರು ಅವರ ಮನೆ ಪ್ರವೇಶಿಸಿ ಬಂಧಿಸಲು ಪ್ರಯತ್ನಿಸಿದ್ದು, ನಂತರ ನೋಟಿಸ್ ನೀಡಿರುವುದು ವರದಿಯಾಗಿದೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ  ಖಚಿತಪಡಿಸಿದ್ದಾರೆ. ಸೌಜನ್ಯ ಪರ ಧ್ವನಿಯೆತ್ತಿದ

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶವು ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದೆ. ಪರ ಧ್ವನಿಯೆತ್ತಿದ

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ತಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದು, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...