Homeಮುಖಪುಟತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

- Advertisement -
- Advertisement -

ಸುಲಿಗೆ ಮತ್ತು ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ಪೂರ್ವ ಸೂಚನೆ ನೀಡದೆ ಅವರನ್ನು ಬಂಧಿಸುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

ಈ ಹಿನ್ನೆಲೆ ತನ್ನ ವಿರುದ್ಧ ಮತ್ತು ಎನ್‌ಸಿಬಿ ಅಧಿಕಾರಿಗಳ ವಿರುದ್ಧದ ಸುಲಿಗೆ ದೂರುಗಳ ಕುರಿತು ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಮೀರ್‌ ವಾಂಖೆಡೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದ ಹೈ-ಪ್ರೊಫೈಲ್ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಸಮೀರ್‌ ವಾಂಖೆಡೆ ವಿರುದ್ಧ ಸುಲಿಗೆ ಆರೋಪ ಕೇಳಿಬಂದಿದೆ. ಅಧಿಕಾರಿ ವಿರುದ್ಧ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸತತವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ಮುಂಬೈನ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದ ಸಾಕ್ಷಿಯಾಗಿರುವ ಪ್ರಭಾಕರ್ ಸೈಲ್, ’ಆರ್ಯನ್ ಖಾನ್‌ ಅವರನ್ನು ಬಿಟ್ಟುಕೊಡಲು ಏಜೆನ್ಸಿ ಅಧಿಕಾರಿಗಳು ಮತ್ತು ಸ್ವತಂತ್ರ ಸಾಕ್ಷಿಗಳು 25 ಕೋಟಿ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಆರೋಪ ಮಾಡಿದ್ದಾರೆ. ಇದರಿಂದ ವಾಂಖೆಡೆ ಎನ್‌ಸಿಬಿ ವಿಜಿಲೆನ್ಸ್ ತನಿಖೆಯನ್ನು ಎದುರಿಸುತ್ತಿದ್ದಾರೆ.

“ನನ್ನ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶಿಸಲಾಗಿದೆ. ನಾನು ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಯಾಗಿದ್ದರೂ ರಾಜ್ಯವು ತನ್ನ ಕರ್ತವ್ಯವನ್ನು ಮೀರುತ್ತಿದೆ. ನಾನು ಎನ್‌ಸಿಬಿಗೆ ಸಹಕರಿಸುತ್ತೇನೆ, ಆದರೆ ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ. ರಾಜ್ಯವು ನನ್ನ ಮೇಲೆ ವೈಯಕ್ತಿಕವಾಗಿ ದಾಳಿ ನಡೆಸುತ್ತಿದೆ. ಅವರು ನನ್ನನ್ನು ಯಾವುದೇ ದಿನವಾದರೂ ಬಂಧಿಸುತ್ತಾರೆ. ಆದ್ದರಿಂದ ನನಗೆ ಮಧ್ಯಂತರ ರಕ್ಷಣೆಯ ಅಗತ್ಯವಿದೆ” ಎಂದು ವಾಂಖೆಡೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ವಾಂಖೆಡೆ ಪರ ವಕೀಲರು ನ್ಯಾಯಮೂರ್ತಿ ನಿತಿನ್ ಎಂ ಜಮ್ದಾರ್ ಮತ್ತು ನ್ಯಾಯಮೂರ್ತಿ ಸಾರಂಗ್ ವಿ ಕೊತ್ವಾಲ್ ಅವರ ವಿಭಾಗೀಯ ಪೀಠಕ್ಕೆ ಹೇಳಿದ್ದಾರೆ.

ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಚೀಫ್ ಪಬ್ಲಿಕ್ ಪ್ರಾಸಿಕ್ಯೂಟರ್ ಅರುಣಾ ಪೈ, ವಾಂಖೆಡೆ ಅವರ ಅರ್ಜಿ ಅಕಾಲಿಕವಾಗಿದ್ದು, ಅವರ ವಿರುದ್ಧ ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಹೇಳಿದ್ದಾರೆ. “ಕಿರಣ್ ಗೋಸಾವಿ ಸೇರಿದಂತೆ ಖಾಸಗಿ ವ್ಯಕ್ತಿಗಳ ವಿರುದ್ಧ ನಾಲ್ಕು ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಇನ್ನು ಪ್ರಾಥಮಿಕ ವಿಚಾರಣೆಯನ್ನು ನಡೆಸುತ್ತಿದ್ದೇವೆ ಮತ್ತು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ” ಎಂದು ಪೈ ಸ್ಪಷ್ಟಪಡಿಸಿದ್ದಾರೆ.

ಇತ್ತ ಮತ್ತೆ ಬಿಜೆಪಿ ವಿರುದ್ಧ ಕಿಡಿ ಕಾರಿರುವ ಸಚಿವ ನವಾಬ್ ಮಲಿಕ್, “ಬಿಜೆಪಿ ಕೇಂದ್ರ ತನಿಖಾ ಏಜೆನ್ಸಿಗಳನ್ನು ಬಳಸಿ ಮಹಾರಾಷ್ಟ್ರ, ಮುಂಬೈ , ಬಾಲಿವುಡ್‌ ಹೆಸರು ಕೆಡೆಸಲು ಬಿಜೆಪಿ ಯತ್ನಿಸುತ್ತಿದೆ. ಈಗಾಗಲೇ ಯೋಗಿ ಆದಿತ್ಯನಾಥ್ ನೋಯಿಡಾದಲ್ಲಿ ಫಿಲಂ ಸಿಟಿ ಕಟ್ಟಲು ಬಯಸಿದ್ದಾರೆ’ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...