Homeಮುಖಪುಟಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

ಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎನ್‌ಸಿಬಿಯ ಮಾಜಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ಅರ್ಜಿಯನ್ನು ನ್ಯಾಯಾಲಯದ ಅನುಮತಿಯಿಲ್ಲದೇ ವಿಚಾರಣೆಗೆ ಪಟ್ಟಿ ಮಾಡಿರುವ ಕುರಿತು ಬಾಂಬೆ ಹೈಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ನಿರಾಕರಿಸಿದ್ದು, ಯಾವುದೇ ತುರ್ತು ವಿಚಾರಣೆ ಇಲ್ಲ ಎಂದು ತಿಳಿಸಿದೆ.

2008 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ವಾಂಖೆಡೆ ಅವರು ನವಿ ಮುಂಬೈನಲ್ಲಿರುವ ತಮ್ಮ ರೆಸ್ಟೋರೆಂಟ್ ಮತ್ತು ಬಾರ್‌ನ ಮದ್ಯದ ಪರವಾನಗಿಯನ್ನು ರದ್ದುಗೊಳಿಸಿ, ಥಾಣೆ ಅಬಕಾರಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸೋಮವಾರ ಅರ್ಜಿ ಸಲ್ಲಿಸಿದರು. ಜೊತೆಗೆ ರದ್ದುಪಡಿಸಿದ ಪರವಾನಗಿಯನ್ನು ವಾಪಸ್ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

“ಈ ಅರ್ಜಿಯನ್ನು ಸೋಮವಾರ ನಮ್ಮ ಮುಂದೆ ಉಲ್ಲೇಖಿಸದಿರುವಾಗ ಇಂದು ಹೇಗೆ ಇದನ್ನು ಸೇರಿಸಲಾಗಿದೆ? ನಾವು ಅರ್ಜಿ ವಿಚಾರಣೆಗೆ ಅನುಮತಿ ನೀಡಿಲ್ಲ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಸೋಮವಾರ ಈ ವಿಷಯವನ್ನು ಪ್ರಸ್ತಾಪಿಸಲು ಕಾಯುತ್ತಿದ್ದೇವು, ಆದರೆ ನ್ಯಾಯಾಲಯದ ಸಿಬ್ಬಂದಿ ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು ಎಂದು ವಾಂಖೆಡೆ ಪರ ವಕೀಲರಾದ ವೀಣಾ ಥದಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ಪೀಠವು ನ್ಯಾಯಾಲಯದ ಸಿಬ್ಬಂದಿಗೆ ಹಾಗೆ ಮಾಡದಂತೆ ಎಚ್ಚರಿಕೆ ನೀಡಿದೆ.

“ಬಡವರು ಅರ್ಜಿ ಸಲ್ಲಿಸುತ್ತಾರೆ. ಆದರೆ ಅವರ ಪ್ರಕರಣವನ್ನು ಎಂದಿಗೂ ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ. ಪ್ರಭಾವಿ ವ್ಯಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಅವರ ಮನವಿಯನ್ನು ತಕ್ಷಣವೇ ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ” ಎಂದು ನ್ಯಾಯಮೂರ್ತಿ ಜಾಮ್ದಾರ್ ಟೀಕಿಸಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಯಾವುದೇ ತುರ್ತು ವಿಚಾರಣೆ ಮಾಡಲು ಹೋಗುವುದಿಲ್ಲ. ಅದನ್ನು ಸೂಕ್ತ ಸಮಯದಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

“ನನ್ನ ಕಕ್ಷಿದಾರ (ವಾಂಖೆಡೆ) ಡ್ರಗ್ಸ್ ಪ್ರಕರಣದಲ್ಲಿ ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಬಂಧಿಸಿದ ನಂತರ, ಸಚಿವರು ನವೆಂಬರ್ 2021 ರಲ್ಲಿ ಥಾಣೆ ಅಬಕಾರಿ ಕಲೆಕ್ಟರ್‌ಗೆ ಬಾರ್‌ ಪರವಾನಗಿ ಕುರಿತು ಪ್ರಶ್ನೆಗಳಿರುವ ‍ಪತ್ರವನ್ನು ಬರೆದಿದ್ದಾರೆ. ಪತ್ರದ ಅನುಸಾರ, ವಿಚಾರಣೆಯನ್ನು ಪ್ರಾರಂಭಿಸಲಾಯಿತು. ವಾಂಖೆಡೆಗೆ ಮೂರು ಶೋಕಾಸ್ ನೋಟಿಸ್‌ಗಳನ್ನು ನೀಡಲಾಯಿತು. ನಂತರ ವಿಚಾರಣೆ ನಡೆಸಿ ಪರವಾನಗಿ ರದ್ದುಗೊಳಿಸಲಾಯಿತು. ಆದ್ದರಿಂದ, ಸಮೀರ್‌ ವಾಂಖೆಡೆ ರದ್ದತಿಯನ್ನು ಪ್ರಶ್ನಿಸಿ ಮತ್ತು ಪರವಾನಗಿಯನ್ನು ಮರಳಿ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ” ಎಂದು ವಾಂಖೆಡೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.


ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....