Homeಮುಖಪುಟಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

ಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎನ್‌ಸಿಬಿಯ ಮಾಜಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ಅರ್ಜಿಯನ್ನು ನ್ಯಾಯಾಲಯದ ಅನುಮತಿಯಿಲ್ಲದೇ ವಿಚಾರಣೆಗೆ ಪಟ್ಟಿ ಮಾಡಿರುವ ಕುರಿತು ಬಾಂಬೆ ಹೈಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ನಿರಾಕರಿಸಿದ್ದು, ಯಾವುದೇ ತುರ್ತು ವಿಚಾರಣೆ ಇಲ್ಲ ಎಂದು ತಿಳಿಸಿದೆ.

2008 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ವಾಂಖೆಡೆ ಅವರು ನವಿ ಮುಂಬೈನಲ್ಲಿರುವ ತಮ್ಮ ರೆಸ್ಟೋರೆಂಟ್ ಮತ್ತು ಬಾರ್‌ನ ಮದ್ಯದ ಪರವಾನಗಿಯನ್ನು ರದ್ದುಗೊಳಿಸಿ, ಥಾಣೆ ಅಬಕಾರಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸೋಮವಾರ ಅರ್ಜಿ ಸಲ್ಲಿಸಿದರು. ಜೊತೆಗೆ ರದ್ದುಪಡಿಸಿದ ಪರವಾನಗಿಯನ್ನು ವಾಪಸ್ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

“ಈ ಅರ್ಜಿಯನ್ನು ಸೋಮವಾರ ನಮ್ಮ ಮುಂದೆ ಉಲ್ಲೇಖಿಸದಿರುವಾಗ ಇಂದು ಹೇಗೆ ಇದನ್ನು ಸೇರಿಸಲಾಗಿದೆ? ನಾವು ಅರ್ಜಿ ವಿಚಾರಣೆಗೆ ಅನುಮತಿ ನೀಡಿಲ್ಲ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಸೋಮವಾರ ಈ ವಿಷಯವನ್ನು ಪ್ರಸ್ತಾಪಿಸಲು ಕಾಯುತ್ತಿದ್ದೇವು, ಆದರೆ ನ್ಯಾಯಾಲಯದ ಸಿಬ್ಬಂದಿ ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು ಎಂದು ವಾಂಖೆಡೆ ಪರ ವಕೀಲರಾದ ವೀಣಾ ಥದಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ಪೀಠವು ನ್ಯಾಯಾಲಯದ ಸಿಬ್ಬಂದಿಗೆ ಹಾಗೆ ಮಾಡದಂತೆ ಎಚ್ಚರಿಕೆ ನೀಡಿದೆ.

“ಬಡವರು ಅರ್ಜಿ ಸಲ್ಲಿಸುತ್ತಾರೆ. ಆದರೆ ಅವರ ಪ್ರಕರಣವನ್ನು ಎಂದಿಗೂ ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ. ಪ್ರಭಾವಿ ವ್ಯಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಅವರ ಮನವಿಯನ್ನು ತಕ್ಷಣವೇ ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ” ಎಂದು ನ್ಯಾಯಮೂರ್ತಿ ಜಾಮ್ದಾರ್ ಟೀಕಿಸಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಯಾವುದೇ ತುರ್ತು ವಿಚಾರಣೆ ಮಾಡಲು ಹೋಗುವುದಿಲ್ಲ. ಅದನ್ನು ಸೂಕ್ತ ಸಮಯದಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

“ನನ್ನ ಕಕ್ಷಿದಾರ (ವಾಂಖೆಡೆ) ಡ್ರಗ್ಸ್ ಪ್ರಕರಣದಲ್ಲಿ ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಬಂಧಿಸಿದ ನಂತರ, ಸಚಿವರು ನವೆಂಬರ್ 2021 ರಲ್ಲಿ ಥಾಣೆ ಅಬಕಾರಿ ಕಲೆಕ್ಟರ್‌ಗೆ ಬಾರ್‌ ಪರವಾನಗಿ ಕುರಿತು ಪ್ರಶ್ನೆಗಳಿರುವ ‍ಪತ್ರವನ್ನು ಬರೆದಿದ್ದಾರೆ. ಪತ್ರದ ಅನುಸಾರ, ವಿಚಾರಣೆಯನ್ನು ಪ್ರಾರಂಭಿಸಲಾಯಿತು. ವಾಂಖೆಡೆಗೆ ಮೂರು ಶೋಕಾಸ್ ನೋಟಿಸ್‌ಗಳನ್ನು ನೀಡಲಾಯಿತು. ನಂತರ ವಿಚಾರಣೆ ನಡೆಸಿ ಪರವಾನಗಿ ರದ್ದುಗೊಳಿಸಲಾಯಿತು. ಆದ್ದರಿಂದ, ಸಮೀರ್‌ ವಾಂಖೆಡೆ ರದ್ದತಿಯನ್ನು ಪ್ರಶ್ನಿಸಿ ಮತ್ತು ಪರವಾನಗಿಯನ್ನು ಮರಳಿ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ” ಎಂದು ವಾಂಖೆಡೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.


ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...