Homeಮುಖಪುಟಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

ಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎನ್‌ಸಿಬಿಯ ಮಾಜಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ಅರ್ಜಿಯನ್ನು ನ್ಯಾಯಾಲಯದ ಅನುಮತಿಯಿಲ್ಲದೇ ವಿಚಾರಣೆಗೆ ಪಟ್ಟಿ ಮಾಡಿರುವ ಕುರಿತು ಬಾಂಬೆ ಹೈಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ನಿರಾಕರಿಸಿದ್ದು, ಯಾವುದೇ ತುರ್ತು ವಿಚಾರಣೆ ಇಲ್ಲ ಎಂದು ತಿಳಿಸಿದೆ.

2008 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ವಾಂಖೆಡೆ ಅವರು ನವಿ ಮುಂಬೈನಲ್ಲಿರುವ ತಮ್ಮ ರೆಸ್ಟೋರೆಂಟ್ ಮತ್ತು ಬಾರ್‌ನ ಮದ್ಯದ ಪರವಾನಗಿಯನ್ನು ರದ್ದುಗೊಳಿಸಿ, ಥಾಣೆ ಅಬಕಾರಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸೋಮವಾರ ಅರ್ಜಿ ಸಲ್ಲಿಸಿದರು. ಜೊತೆಗೆ ರದ್ದುಪಡಿಸಿದ ಪರವಾನಗಿಯನ್ನು ವಾಪಸ್ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

“ಈ ಅರ್ಜಿಯನ್ನು ಸೋಮವಾರ ನಮ್ಮ ಮುಂದೆ ಉಲ್ಲೇಖಿಸದಿರುವಾಗ ಇಂದು ಹೇಗೆ ಇದನ್ನು ಸೇರಿಸಲಾಗಿದೆ? ನಾವು ಅರ್ಜಿ ವಿಚಾರಣೆಗೆ ಅನುಮತಿ ನೀಡಿಲ್ಲ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಸೋಮವಾರ ಈ ವಿಷಯವನ್ನು ಪ್ರಸ್ತಾಪಿಸಲು ಕಾಯುತ್ತಿದ್ದೇವು, ಆದರೆ ನ್ಯಾಯಾಲಯದ ಸಿಬ್ಬಂದಿ ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು ಎಂದು ವಾಂಖೆಡೆ ಪರ ವಕೀಲರಾದ ವೀಣಾ ಥದಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ಪೀಠವು ನ್ಯಾಯಾಲಯದ ಸಿಬ್ಬಂದಿಗೆ ಹಾಗೆ ಮಾಡದಂತೆ ಎಚ್ಚರಿಕೆ ನೀಡಿದೆ.

“ಬಡವರು ಅರ್ಜಿ ಸಲ್ಲಿಸುತ್ತಾರೆ. ಆದರೆ ಅವರ ಪ್ರಕರಣವನ್ನು ಎಂದಿಗೂ ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ. ಪ್ರಭಾವಿ ವ್ಯಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಅವರ ಮನವಿಯನ್ನು ತಕ್ಷಣವೇ ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ” ಎಂದು ನ್ಯಾಯಮೂರ್ತಿ ಜಾಮ್ದಾರ್ ಟೀಕಿಸಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಯಾವುದೇ ತುರ್ತು ವಿಚಾರಣೆ ಮಾಡಲು ಹೋಗುವುದಿಲ್ಲ. ಅದನ್ನು ಸೂಕ್ತ ಸಮಯದಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

“ನನ್ನ ಕಕ್ಷಿದಾರ (ವಾಂಖೆಡೆ) ಡ್ರಗ್ಸ್ ಪ್ರಕರಣದಲ್ಲಿ ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಬಂಧಿಸಿದ ನಂತರ, ಸಚಿವರು ನವೆಂಬರ್ 2021 ರಲ್ಲಿ ಥಾಣೆ ಅಬಕಾರಿ ಕಲೆಕ್ಟರ್‌ಗೆ ಬಾರ್‌ ಪರವಾನಗಿ ಕುರಿತು ಪ್ರಶ್ನೆಗಳಿರುವ ‍ಪತ್ರವನ್ನು ಬರೆದಿದ್ದಾರೆ. ಪತ್ರದ ಅನುಸಾರ, ವಿಚಾರಣೆಯನ್ನು ಪ್ರಾರಂಭಿಸಲಾಯಿತು. ವಾಂಖೆಡೆಗೆ ಮೂರು ಶೋಕಾಸ್ ನೋಟಿಸ್‌ಗಳನ್ನು ನೀಡಲಾಯಿತು. ನಂತರ ವಿಚಾರಣೆ ನಡೆಸಿ ಪರವಾನಗಿ ರದ್ದುಗೊಳಿಸಲಾಯಿತು. ಆದ್ದರಿಂದ, ಸಮೀರ್‌ ವಾಂಖೆಡೆ ರದ್ದತಿಯನ್ನು ಪ್ರಶ್ನಿಸಿ ಮತ್ತು ಪರವಾನಗಿಯನ್ನು ಮರಳಿ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ” ಎಂದು ವಾಂಖೆಡೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.


ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...