Homeಮುಖಪುಟಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

ಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎನ್‌ಸಿಬಿಯ ಮಾಜಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ಅರ್ಜಿಯನ್ನು ನ್ಯಾಯಾಲಯದ ಅನುಮತಿಯಿಲ್ಲದೇ ವಿಚಾರಣೆಗೆ ಪಟ್ಟಿ ಮಾಡಿರುವ ಕುರಿತು ಬಾಂಬೆ ಹೈಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ನಿರಾಕರಿಸಿದ್ದು, ಯಾವುದೇ ತುರ್ತು ವಿಚಾರಣೆ ಇಲ್ಲ ಎಂದು ತಿಳಿಸಿದೆ.

2008 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ವಾಂಖೆಡೆ ಅವರು ನವಿ ಮುಂಬೈನಲ್ಲಿರುವ ತಮ್ಮ ರೆಸ್ಟೋರೆಂಟ್ ಮತ್ತು ಬಾರ್‌ನ ಮದ್ಯದ ಪರವಾನಗಿಯನ್ನು ರದ್ದುಗೊಳಿಸಿ, ಥಾಣೆ ಅಬಕಾರಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸೋಮವಾರ ಅರ್ಜಿ ಸಲ್ಲಿಸಿದರು. ಜೊತೆಗೆ ರದ್ದುಪಡಿಸಿದ ಪರವಾನಗಿಯನ್ನು ವಾಪಸ್ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

“ಈ ಅರ್ಜಿಯನ್ನು ಸೋಮವಾರ ನಮ್ಮ ಮುಂದೆ ಉಲ್ಲೇಖಿಸದಿರುವಾಗ ಇಂದು ಹೇಗೆ ಇದನ್ನು ಸೇರಿಸಲಾಗಿದೆ? ನಾವು ಅರ್ಜಿ ವಿಚಾರಣೆಗೆ ಅನುಮತಿ ನೀಡಿಲ್ಲ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಸೋಮವಾರ ಈ ವಿಷಯವನ್ನು ಪ್ರಸ್ತಾಪಿಸಲು ಕಾಯುತ್ತಿದ್ದೇವು, ಆದರೆ ನ್ಯಾಯಾಲಯದ ಸಿಬ್ಬಂದಿ ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು ಎಂದು ವಾಂಖೆಡೆ ಪರ ವಕೀಲರಾದ ವೀಣಾ ಥದಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ಪೀಠವು ನ್ಯಾಯಾಲಯದ ಸಿಬ್ಬಂದಿಗೆ ಹಾಗೆ ಮಾಡದಂತೆ ಎಚ್ಚರಿಕೆ ನೀಡಿದೆ.

“ಬಡವರು ಅರ್ಜಿ ಸಲ್ಲಿಸುತ್ತಾರೆ. ಆದರೆ ಅವರ ಪ್ರಕರಣವನ್ನು ಎಂದಿಗೂ ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ. ಪ್ರಭಾವಿ ವ್ಯಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಅವರ ಮನವಿಯನ್ನು ತಕ್ಷಣವೇ ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ” ಎಂದು ನ್ಯಾಯಮೂರ್ತಿ ಜಾಮ್ದಾರ್ ಟೀಕಿಸಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಯಾವುದೇ ತುರ್ತು ವಿಚಾರಣೆ ಮಾಡಲು ಹೋಗುವುದಿಲ್ಲ. ಅದನ್ನು ಸೂಕ್ತ ಸಮಯದಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

“ನನ್ನ ಕಕ್ಷಿದಾರ (ವಾಂಖೆಡೆ) ಡ್ರಗ್ಸ್ ಪ್ರಕರಣದಲ್ಲಿ ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಬಂಧಿಸಿದ ನಂತರ, ಸಚಿವರು ನವೆಂಬರ್ 2021 ರಲ್ಲಿ ಥಾಣೆ ಅಬಕಾರಿ ಕಲೆಕ್ಟರ್‌ಗೆ ಬಾರ್‌ ಪರವಾನಗಿ ಕುರಿತು ಪ್ರಶ್ನೆಗಳಿರುವ ‍ಪತ್ರವನ್ನು ಬರೆದಿದ್ದಾರೆ. ಪತ್ರದ ಅನುಸಾರ, ವಿಚಾರಣೆಯನ್ನು ಪ್ರಾರಂಭಿಸಲಾಯಿತು. ವಾಂಖೆಡೆಗೆ ಮೂರು ಶೋಕಾಸ್ ನೋಟಿಸ್‌ಗಳನ್ನು ನೀಡಲಾಯಿತು. ನಂತರ ವಿಚಾರಣೆ ನಡೆಸಿ ಪರವಾನಗಿ ರದ್ದುಗೊಳಿಸಲಾಯಿತು. ಆದ್ದರಿಂದ, ಸಮೀರ್‌ ವಾಂಖೆಡೆ ರದ್ದತಿಯನ್ನು ಪ್ರಶ್ನಿಸಿ ಮತ್ತು ಪರವಾನಗಿಯನ್ನು ಮರಳಿ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ” ಎಂದು ವಾಂಖೆಡೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.


ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...