Homeಮುಖಪುಟಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

ಬಾರ್‌ ಲೈಸೆನ್ಸ್‌ ರದ್ದು: ಸಮೀರ್‌ ವಾಂಖೆಡೆ ಅರ್ಜಿ ವಿಚಾರಣೆ ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎನ್‌ಸಿಬಿಯ ಮಾಜಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ಅರ್ಜಿಯನ್ನು ನ್ಯಾಯಾಲಯದ ಅನುಮತಿಯಿಲ್ಲದೇ ವಿಚಾರಣೆಗೆ ಪಟ್ಟಿ ಮಾಡಿರುವ ಕುರಿತು ಬಾಂಬೆ ಹೈಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ನಿರಾಕರಿಸಿದ್ದು, ಯಾವುದೇ ತುರ್ತು ವಿಚಾರಣೆ ಇಲ್ಲ ಎಂದು ತಿಳಿಸಿದೆ.

2008 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ವಾಂಖೆಡೆ ಅವರು ನವಿ ಮುಂಬೈನಲ್ಲಿರುವ ತಮ್ಮ ರೆಸ್ಟೋರೆಂಟ್ ಮತ್ತು ಬಾರ್‌ನ ಮದ್ಯದ ಪರವಾನಗಿಯನ್ನು ರದ್ದುಗೊಳಿಸಿ, ಥಾಣೆ ಅಬಕಾರಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸೋಮವಾರ ಅರ್ಜಿ ಸಲ್ಲಿಸಿದರು. ಜೊತೆಗೆ ರದ್ದುಪಡಿಸಿದ ಪರವಾನಗಿಯನ್ನು ವಾಪಸ್ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

“ಈ ಅರ್ಜಿಯನ್ನು ಸೋಮವಾರ ನಮ್ಮ ಮುಂದೆ ಉಲ್ಲೇಖಿಸದಿರುವಾಗ ಇಂದು ಹೇಗೆ ಇದನ್ನು ಸೇರಿಸಲಾಗಿದೆ? ನಾವು ಅರ್ಜಿ ವಿಚಾರಣೆಗೆ ಅನುಮತಿ ನೀಡಿಲ್ಲ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಸೋಮವಾರ ಈ ವಿಷಯವನ್ನು ಪ್ರಸ್ತಾಪಿಸಲು ಕಾಯುತ್ತಿದ್ದೇವು, ಆದರೆ ನ್ಯಾಯಾಲಯದ ಸಿಬ್ಬಂದಿ ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು ಎಂದು ವಾಂಖೆಡೆ ಪರ ವಕೀಲರಾದ ವೀಣಾ ಥದಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ಪೀಠವು ನ್ಯಾಯಾಲಯದ ಸಿಬ್ಬಂದಿಗೆ ಹಾಗೆ ಮಾಡದಂತೆ ಎಚ್ಚರಿಕೆ ನೀಡಿದೆ.

“ಬಡವರು ಅರ್ಜಿ ಸಲ್ಲಿಸುತ್ತಾರೆ. ಆದರೆ ಅವರ ಪ್ರಕರಣವನ್ನು ಎಂದಿಗೂ ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ. ಪ್ರಭಾವಿ ವ್ಯಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಅವರ ಮನವಿಯನ್ನು ತಕ್ಷಣವೇ ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ” ಎಂದು ನ್ಯಾಯಮೂರ್ತಿ ಜಾಮ್ದಾರ್ ಟೀಕಿಸಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಯಾವುದೇ ತುರ್ತು ವಿಚಾರಣೆ ಮಾಡಲು ಹೋಗುವುದಿಲ್ಲ. ಅದನ್ನು ಸೂಕ್ತ ಸಮಯದಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

“ನನ್ನ ಕಕ್ಷಿದಾರ (ವಾಂಖೆಡೆ) ಡ್ರಗ್ಸ್ ಪ್ರಕರಣದಲ್ಲಿ ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಬಂಧಿಸಿದ ನಂತರ, ಸಚಿವರು ನವೆಂಬರ್ 2021 ರಲ್ಲಿ ಥಾಣೆ ಅಬಕಾರಿ ಕಲೆಕ್ಟರ್‌ಗೆ ಬಾರ್‌ ಪರವಾನಗಿ ಕುರಿತು ಪ್ರಶ್ನೆಗಳಿರುವ ‍ಪತ್ರವನ್ನು ಬರೆದಿದ್ದಾರೆ. ಪತ್ರದ ಅನುಸಾರ, ವಿಚಾರಣೆಯನ್ನು ಪ್ರಾರಂಭಿಸಲಾಯಿತು. ವಾಂಖೆಡೆಗೆ ಮೂರು ಶೋಕಾಸ್ ನೋಟಿಸ್‌ಗಳನ್ನು ನೀಡಲಾಯಿತು. ನಂತರ ವಿಚಾರಣೆ ನಡೆಸಿ ಪರವಾನಗಿ ರದ್ದುಗೊಳಿಸಲಾಯಿತು. ಆದ್ದರಿಂದ, ಸಮೀರ್‌ ವಾಂಖೆಡೆ ರದ್ದತಿಯನ್ನು ಪ್ರಶ್ನಿಸಿ ಮತ್ತು ಪರವಾನಗಿಯನ್ನು ಮರಳಿ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ” ಎಂದು ವಾಂಖೆಡೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.


ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...