Homeಮುಖಪುಟ’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

- Advertisement -
- Advertisement -

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಬಾಲಿವುಡ್ ಚಿತ್ರೋದ್ಯಮದಲ್ಲಿ ಸುಲಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿ, ’ನಾನು ನನ್ನ ಸ್ವಂತ ಹಣದಲ್ಲಿ, ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’ ಎಂದಿದ್ದಾರೆ.

ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿರುವ ಎನ್‌ಸಿಬಿ, ಬಾಲಿವುಡ್ ಸೆಲೆಬ್ರಿಟಿಗಳನ್ನು ಡ್ರಗ್ಸ್ ಪ್ರಕರಣದಲ್ಲಿ ತನಿಖೆ ಮಾಡುತ್ತಿದೆ. ಇದು ಮಹಾರಾಷ್ಟ್ರ ಸರ್ಕಾರದ ಹೆಸರು ಹಾಳು ಮಾಡಲು ಒಕ್ಕೂಟ ಸರ್ಕಾರ ನಡೆಸುತ್ತಿರುವ ಪಿತೂರಿ ಎಂದು ಸಚಿವ ಆರೋಪಿಸಿದ್ದಾರೆ.

“ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಬಿಜೆಪಿಯ ಆಜ್ಞೆಯಂತೆ ವರ್ತಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇಡೀ ಚಿತ್ರೋದ್ಯಮ ಮಾಲ್ಡೀವ್ಸ್‌ನಲ್ಲಿತ್ತು. ಈ ವೇಳೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ಅಧಿಕಾರಿ ಮತ್ತು ಅವರ ಕುಟುಂಬ ಏನು ಮಾಡುತ್ತಿತ್ತು? ಇದನ್ನು ಸಮೀರ್ ವಾಂಖೆಡೆ ಸ್ಪಷ್ಟಪಡಿಸಬೇಕು” ಎಂದು ನವಾಬ್ ಮಲಿಕ್ ಗುರುವಾರ ಒತ್ತಾಯಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

NDTVಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ, “ನಾನು ದುಬೈಗೆ ಹೋಗಿಲ್ಲ. ನಾನು ಮಾಲ್ಡೀವ್ಸ್‌ಗೆ ಹೋಗಿದ್ದೆ. ನಾನು ನನ್ನ ಮಕ್ಕಳೊಂದಿಗೆ, ಕಾನೂನುಬದ್ಧ ಅನುಮತಿಯೊಂದಿಗೆ ಮತ್ತು ನನ್ನ ಸ್ವಂತ ಹಣದಲ್ಲಿ ಹೋಗಿದ್ದೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿಯೊಂದಿಗೆ ಮಾಲ್ಡೀವ್ಸ್‌ಗೆ ಹೋಗಿಲ್ಲ. ಮಕ್ಕಳೊಂದಿಗೆ ಹೋಗಿದ್ದೆ. ಅದು ಲಾಕ್‌ಡೌನ್ ಸಮಯ ಮುಗಿದ ಮೇಲೆ ಒಂದೆರಡು ತಿಂಗಳ ಹಿಂದೆ ಭೇಟಿ ನೀಡಿದ್ದೆ” ಎಂದಿದ್ದಾರೆ. ಸಚಿವ ನವಾಬ್ ಮಲಿಕ್, ಸಮೀರ್ ವಾಂಖೆಡೆ ಅವರ ಸಹೋದರಿ ಮಾಲ್ಡೀವ್ಸ್‌ನಲ್ಲಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದರು.

’ನವಾಬ್ ಮಲಿಕ್ ಅವರು ರಾಜ್ಯದ ಮಂತ್ರಿಯಾಗಿದ್ದು, ಅವರು ಆಡಳಿತ ವ್ಯವಸ್ಥೆ ಹೊಂದಿದ್ದಾರೆ. ಹೀಗಾಗಿ ತನಿಖೆ ಮಾಡಬಹುದು. ಈ ಆರೋಪಗಳಿಗೆ ಸಾಕ್ಷಿಯಿದ್ದರೆ ಅದನ್ನು ತೋರಿಸಲಿ. ಅದು ಬಿಟ್ಟು ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಕಳೆದ 15 ದಿನಗಳಿಂದ ನಮ್ಮ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ನನ್ನ ಮೃತ ತಾಯಿ, ಸಹೋದರಿ ಮತ್ತು ನಿವೃತ್ತ ತಂದೆಯ ಮೇಲೆ ದಾಳಿ ನಡೆಯುತ್ತಿವೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು NCB ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಅಸಹಜ ಸಾವಿಗೆ ತುತ್ತಾದ ಬಳಿಕ ಕೇಂದ್ರ ಸರ್ಕಾರ ಎನ್‌ಸಿಬಿಗೆ ಸಮೀರ್ ವಾಂಖೆಡೆ ಅವರನ್ನು ಕರೆ ತಂದಿದೆ ಎಂದು ಆರೋಪಿಸಿದ್ದಾರೆ. ಸುಶಾಂತ ಸಿಂಗ್ ಸಾವಿನ ಬಳಿಕ ಕೇಳಿ ಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ, ನಟಿಯರನ್ನು ಎನ್‌ಸಿಬಿ ಗುರಿ ಮಾಡಿತ್ತು. ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ನಕಲಿ ಪ್ರಕರಣದಲ್ಲಿ ಸೇರಿಸಿದ್ದಾರೆ ಎಂದು ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...