Homeಮುಖಪುಟ’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

- Advertisement -
- Advertisement -

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಬಾಲಿವುಡ್ ಚಿತ್ರೋದ್ಯಮದಲ್ಲಿ ಸುಲಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿ, ’ನಾನು ನನ್ನ ಸ್ವಂತ ಹಣದಲ್ಲಿ, ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’ ಎಂದಿದ್ದಾರೆ.

ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿರುವ ಎನ್‌ಸಿಬಿ, ಬಾಲಿವುಡ್ ಸೆಲೆಬ್ರಿಟಿಗಳನ್ನು ಡ್ರಗ್ಸ್ ಪ್ರಕರಣದಲ್ಲಿ ತನಿಖೆ ಮಾಡುತ್ತಿದೆ. ಇದು ಮಹಾರಾಷ್ಟ್ರ ಸರ್ಕಾರದ ಹೆಸರು ಹಾಳು ಮಾಡಲು ಒಕ್ಕೂಟ ಸರ್ಕಾರ ನಡೆಸುತ್ತಿರುವ ಪಿತೂರಿ ಎಂದು ಸಚಿವ ಆರೋಪಿಸಿದ್ದಾರೆ.

“ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಬಿಜೆಪಿಯ ಆಜ್ಞೆಯಂತೆ ವರ್ತಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇಡೀ ಚಿತ್ರೋದ್ಯಮ ಮಾಲ್ಡೀವ್ಸ್‌ನಲ್ಲಿತ್ತು. ಈ ವೇಳೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ಅಧಿಕಾರಿ ಮತ್ತು ಅವರ ಕುಟುಂಬ ಏನು ಮಾಡುತ್ತಿತ್ತು? ಇದನ್ನು ಸಮೀರ್ ವಾಂಖೆಡೆ ಸ್ಪಷ್ಟಪಡಿಸಬೇಕು” ಎಂದು ನವಾಬ್ ಮಲಿಕ್ ಗುರುವಾರ ಒತ್ತಾಯಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

NDTVಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ, “ನಾನು ದುಬೈಗೆ ಹೋಗಿಲ್ಲ. ನಾನು ಮಾಲ್ಡೀವ್ಸ್‌ಗೆ ಹೋಗಿದ್ದೆ. ನಾನು ನನ್ನ ಮಕ್ಕಳೊಂದಿಗೆ, ಕಾನೂನುಬದ್ಧ ಅನುಮತಿಯೊಂದಿಗೆ ಮತ್ತು ನನ್ನ ಸ್ವಂತ ಹಣದಲ್ಲಿ ಹೋಗಿದ್ದೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿಯೊಂದಿಗೆ ಮಾಲ್ಡೀವ್ಸ್‌ಗೆ ಹೋಗಿಲ್ಲ. ಮಕ್ಕಳೊಂದಿಗೆ ಹೋಗಿದ್ದೆ. ಅದು ಲಾಕ್‌ಡೌನ್ ಸಮಯ ಮುಗಿದ ಮೇಲೆ ಒಂದೆರಡು ತಿಂಗಳ ಹಿಂದೆ ಭೇಟಿ ನೀಡಿದ್ದೆ” ಎಂದಿದ್ದಾರೆ. ಸಚಿವ ನವಾಬ್ ಮಲಿಕ್, ಸಮೀರ್ ವಾಂಖೆಡೆ ಅವರ ಸಹೋದರಿ ಮಾಲ್ಡೀವ್ಸ್‌ನಲ್ಲಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದರು.

’ನವಾಬ್ ಮಲಿಕ್ ಅವರು ರಾಜ್ಯದ ಮಂತ್ರಿಯಾಗಿದ್ದು, ಅವರು ಆಡಳಿತ ವ್ಯವಸ್ಥೆ ಹೊಂದಿದ್ದಾರೆ. ಹೀಗಾಗಿ ತನಿಖೆ ಮಾಡಬಹುದು. ಈ ಆರೋಪಗಳಿಗೆ ಸಾಕ್ಷಿಯಿದ್ದರೆ ಅದನ್ನು ತೋರಿಸಲಿ. ಅದು ಬಿಟ್ಟು ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಕಳೆದ 15 ದಿನಗಳಿಂದ ನಮ್ಮ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ನನ್ನ ಮೃತ ತಾಯಿ, ಸಹೋದರಿ ಮತ್ತು ನಿವೃತ್ತ ತಂದೆಯ ಮೇಲೆ ದಾಳಿ ನಡೆಯುತ್ತಿವೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು NCB ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಅಸಹಜ ಸಾವಿಗೆ ತುತ್ತಾದ ಬಳಿಕ ಕೇಂದ್ರ ಸರ್ಕಾರ ಎನ್‌ಸಿಬಿಗೆ ಸಮೀರ್ ವಾಂಖೆಡೆ ಅವರನ್ನು ಕರೆ ತಂದಿದೆ ಎಂದು ಆರೋಪಿಸಿದ್ದಾರೆ. ಸುಶಾಂತ ಸಿಂಗ್ ಸಾವಿನ ಬಳಿಕ ಕೇಳಿ ಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ, ನಟಿಯರನ್ನು ಎನ್‌ಸಿಬಿ ಗುರಿ ಮಾಡಿತ್ತು. ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ನಕಲಿ ಪ್ರಕರಣದಲ್ಲಿ ಸೇರಿಸಿದ್ದಾರೆ ಎಂದು ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...