Homeಮುಖಪುಟ’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

- Advertisement -
- Advertisement -

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಬಾಲಿವುಡ್ ಚಿತ್ರೋದ್ಯಮದಲ್ಲಿ ಸುಲಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿ, ’ನಾನು ನನ್ನ ಸ್ವಂತ ಹಣದಲ್ಲಿ, ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’ ಎಂದಿದ್ದಾರೆ.

ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿರುವ ಎನ್‌ಸಿಬಿ, ಬಾಲಿವುಡ್ ಸೆಲೆಬ್ರಿಟಿಗಳನ್ನು ಡ್ರಗ್ಸ್ ಪ್ರಕರಣದಲ್ಲಿ ತನಿಖೆ ಮಾಡುತ್ತಿದೆ. ಇದು ಮಹಾರಾಷ್ಟ್ರ ಸರ್ಕಾರದ ಹೆಸರು ಹಾಳು ಮಾಡಲು ಒಕ್ಕೂಟ ಸರ್ಕಾರ ನಡೆಸುತ್ತಿರುವ ಪಿತೂರಿ ಎಂದು ಸಚಿವ ಆರೋಪಿಸಿದ್ದಾರೆ.

“ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಬಿಜೆಪಿಯ ಆಜ್ಞೆಯಂತೆ ವರ್ತಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇಡೀ ಚಿತ್ರೋದ್ಯಮ ಮಾಲ್ಡೀವ್ಸ್‌ನಲ್ಲಿತ್ತು. ಈ ವೇಳೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ಅಧಿಕಾರಿ ಮತ್ತು ಅವರ ಕುಟುಂಬ ಏನು ಮಾಡುತ್ತಿತ್ತು? ಇದನ್ನು ಸಮೀರ್ ವಾಂಖೆಡೆ ಸ್ಪಷ್ಟಪಡಿಸಬೇಕು” ಎಂದು ನವಾಬ್ ಮಲಿಕ್ ಗುರುವಾರ ಒತ್ತಾಯಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

NDTVಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ, “ನಾನು ದುಬೈಗೆ ಹೋಗಿಲ್ಲ. ನಾನು ಮಾಲ್ಡೀವ್ಸ್‌ಗೆ ಹೋಗಿದ್ದೆ. ನಾನು ನನ್ನ ಮಕ್ಕಳೊಂದಿಗೆ, ಕಾನೂನುಬದ್ಧ ಅನುಮತಿಯೊಂದಿಗೆ ಮತ್ತು ನನ್ನ ಸ್ವಂತ ಹಣದಲ್ಲಿ ಹೋಗಿದ್ದೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿಯೊಂದಿಗೆ ಮಾಲ್ಡೀವ್ಸ್‌ಗೆ ಹೋಗಿಲ್ಲ. ಮಕ್ಕಳೊಂದಿಗೆ ಹೋಗಿದ್ದೆ. ಅದು ಲಾಕ್‌ಡೌನ್ ಸಮಯ ಮುಗಿದ ಮೇಲೆ ಒಂದೆರಡು ತಿಂಗಳ ಹಿಂದೆ ಭೇಟಿ ನೀಡಿದ್ದೆ” ಎಂದಿದ್ದಾರೆ. ಸಚಿವ ನವಾಬ್ ಮಲಿಕ್, ಸಮೀರ್ ವಾಂಖೆಡೆ ಅವರ ಸಹೋದರಿ ಮಾಲ್ಡೀವ್ಸ್‌ನಲ್ಲಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದರು.

’ನವಾಬ್ ಮಲಿಕ್ ಅವರು ರಾಜ್ಯದ ಮಂತ್ರಿಯಾಗಿದ್ದು, ಅವರು ಆಡಳಿತ ವ್ಯವಸ್ಥೆ ಹೊಂದಿದ್ದಾರೆ. ಹೀಗಾಗಿ ತನಿಖೆ ಮಾಡಬಹುದು. ಈ ಆರೋಪಗಳಿಗೆ ಸಾಕ್ಷಿಯಿದ್ದರೆ ಅದನ್ನು ತೋರಿಸಲಿ. ಅದು ಬಿಟ್ಟು ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಕಳೆದ 15 ದಿನಗಳಿಂದ ನಮ್ಮ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ನನ್ನ ಮೃತ ತಾಯಿ, ಸಹೋದರಿ ಮತ್ತು ನಿವೃತ್ತ ತಂದೆಯ ಮೇಲೆ ದಾಳಿ ನಡೆಯುತ್ತಿವೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು NCB ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಅಸಹಜ ಸಾವಿಗೆ ತುತ್ತಾದ ಬಳಿಕ ಕೇಂದ್ರ ಸರ್ಕಾರ ಎನ್‌ಸಿಬಿಗೆ ಸಮೀರ್ ವಾಂಖೆಡೆ ಅವರನ್ನು ಕರೆ ತಂದಿದೆ ಎಂದು ಆರೋಪಿಸಿದ್ದಾರೆ. ಸುಶಾಂತ ಸಿಂಗ್ ಸಾವಿನ ಬಳಿಕ ಕೇಳಿ ಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ, ನಟಿಯರನ್ನು ಎನ್‌ಸಿಬಿ ಗುರಿ ಮಾಡಿತ್ತು. ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ನಕಲಿ ಪ್ರಕರಣದಲ್ಲಿ ಸೇರಿಸಿದ್ದಾರೆ ಎಂದು ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...