Homeಮುಖಪುಟಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

- Advertisement -
- Advertisement -

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ  ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

throwing eggs at Siddaramaiahs car arrested man which party rsk mrq

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“’ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?” ಎಂದು ಕೇಳಿದರು.

ಮೊಟ್ಟೆ ಹೊಡೆದಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊಟ್ಟೆ ಹೊಡೆದ ಕಿಡಿಗೇಡಿ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯ ಹಲವರು ಪ್ರತಿಪಾದಿಸಿದರು. ಆರೋಪಿ ಸಂಪತ್ ಕಾಂಗ್ರೆಸ್ ಬಾವುಟ ಹಿಡಿದಿರುವ ಫೋಟೋ ಬಿಡುಗಡೆ ಮಾಡಿದರು. ಆದರೆ ಶನಿವಾರ ಬೆಳಿಗ್ಗೆ ಮಡಿಕೇರಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, “ಮೊಟ್ಟೆ ಹೊಡೆದ ಕಿಡಿಗೇಡಿ ಬಿಜೆಪಿ ಪಕ್ಷದ ಕಾರ್ಯಕರ್ತ” ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂಪತ್ ಇರುವ ಫೋಟೋಗಳನ್ನು ಬಿಡುಗಡೆ ಮಾಡಿದರು.

throwing eggs at Siddaramaiahs car arrested man which party rsk mrq

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಅಪ್ಪಚ್ಚು ರಂಜನ್, “ಈತ ಯಾರು ಎನ್ನುವುದೇ ಗೊತ್ತಿಲ್ಲ, ಆತನ ಪರಿಚಯವೂ ಇಲ್ಲ. ಆದರೆ ಕಾರ್ಯಕರ್ತರನ್ನು ವಿಚಾರಿಸಿದಾಗ ಅವನು ರಾಮನವಮಿಯಲ್ಲಿ ನಿಮ್ಮೊಂದಿಗೆ ಕೇಸರಿ ಶಲ್ಯ ಹಾಕಿಕೊಂಡು ಫೋಟೋ ತೆಗೆಸಿಕೊಂಡಿದ್ದ ಎಂದು ತಿಳಿದುಬಂದಿತು” ಎಂದಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ.

ಟಿ.ವಿ.9 ಕನ್ನಡ ಸುದ್ದಿವಾಹಿನಿಯ ಜೊತೆ ಮಾತನಾಡಿರುವ ಆರೋಪಿ ಸಂತೋಷ್‌, “ನನಗೆ ಹೆದರಿಕೆಯೇನೂ ಆಗುತ್ತಿಲ್ಲ. ಆದರೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮನೆಗೆ ಬೆಂಕಿ ಇಡುವುದಾಗಿ, ಬಸ್‌ಸ್ಟ್ಯಾಂಡ್‌ನಲ್ಲಿ ನಿಲ್ಲಿಸಿ ಮೊಟ್ಟೆ ಸ್ನಾನ ಮಾಡಿಸುವುದಾಗಿ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾನೆ.

“ನೀವು ನಿಜವಾಗಿಯೂ ಯಾವ ಪಕ್ಷದವರು? ಜೆಡಿಎಸ್‌ನಲ್ಲಿದ್ದ ಜೀವಿಜಯ ಅವರ ಅನುಯಾಯಿ ಎಂದೂ ನೀವು ಹೇಳಿಕೊಂಡಿದ್ದೀರಿ? ನೀವು ನಿಜಕ್ಕೂ ಯಾವ ಪಕ್ಷದವರು?” ಎಂದು ಟಿ.ವಿ.9 ಪ್ರತಿನಿಧಿ ಕೇಳಿದಾಗ, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಕೇಸರಿ ವಸ್ತ್ರ ಧರಿಸಿ ಹಲವು ಕಾರ್ಯಕ್ರಮಗಳಲ್ಲಿ ಆತ ಭಾಗಿಯಾಗಿದ್ದಾನೆಂದು ಪ್ರತಿಪಾದಿಸಿದ ಹಲವಾರು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ ಮಟ್ಟು ಅವರು ಫೇಸ್‌ಬುಕ್‌ನಲ್ಲಿ, “ಈ ಮೊಟ್ಟೆಯ ಸಂಪತ್‌, ರಂಜನ್‌ ಅವರನ್ನು ಅಪ್ಪಚ್ಚಿ ಮಾಡಿಬಿಟ್ಟಿದ್ದಾನೆ” ಎಂಬ ಶೀರ್ಷಿಕೆಯೊಂದಿಗೆ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೀಗೆ ಆರೋಪಿ ಸಂಪತ್ ಸುತ್ತ ಹಲವು ಸುದ್ದಿಗಳು ಹುಟ್ಟಿಕೊಂಡಿವೆ. ಆತ ಮೂಲತಃ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ ಎಂಬ ಗೊಂದಲಗಳು ಹುಟ್ಟಿಕೊಂಡಿವೆ. ಆದರೆ ದುಷ್ಕೃತ್ಯ ನಡೆಸಿ ಆತ ಪೇಚಿಗೆ ಸಿಲುಕಿರುವುದಂತೂ ಮೇಲು ನೋಟಕ್ಕೆ ಸ್ಪಷ್ಟವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...