Homeಮುಖಪುಟಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

- Advertisement -
- Advertisement -

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ  ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

throwing eggs at Siddaramaiahs car arrested man which party rsk mrq

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“’ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?” ಎಂದು ಕೇಳಿದರು.

ಮೊಟ್ಟೆ ಹೊಡೆದಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊಟ್ಟೆ ಹೊಡೆದ ಕಿಡಿಗೇಡಿ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯ ಹಲವರು ಪ್ರತಿಪಾದಿಸಿದರು. ಆರೋಪಿ ಸಂಪತ್ ಕಾಂಗ್ರೆಸ್ ಬಾವುಟ ಹಿಡಿದಿರುವ ಫೋಟೋ ಬಿಡುಗಡೆ ಮಾಡಿದರು. ಆದರೆ ಶನಿವಾರ ಬೆಳಿಗ್ಗೆ ಮಡಿಕೇರಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, “ಮೊಟ್ಟೆ ಹೊಡೆದ ಕಿಡಿಗೇಡಿ ಬಿಜೆಪಿ ಪಕ್ಷದ ಕಾರ್ಯಕರ್ತ” ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂಪತ್ ಇರುವ ಫೋಟೋಗಳನ್ನು ಬಿಡುಗಡೆ ಮಾಡಿದರು.

throwing eggs at Siddaramaiahs car arrested man which party rsk mrq

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಅಪ್ಪಚ್ಚು ರಂಜನ್, “ಈತ ಯಾರು ಎನ್ನುವುದೇ ಗೊತ್ತಿಲ್ಲ, ಆತನ ಪರಿಚಯವೂ ಇಲ್ಲ. ಆದರೆ ಕಾರ್ಯಕರ್ತರನ್ನು ವಿಚಾರಿಸಿದಾಗ ಅವನು ರಾಮನವಮಿಯಲ್ಲಿ ನಿಮ್ಮೊಂದಿಗೆ ಕೇಸರಿ ಶಲ್ಯ ಹಾಕಿಕೊಂಡು ಫೋಟೋ ತೆಗೆಸಿಕೊಂಡಿದ್ದ ಎಂದು ತಿಳಿದುಬಂದಿತು” ಎಂದಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ.

ಟಿ.ವಿ.9 ಕನ್ನಡ ಸುದ್ದಿವಾಹಿನಿಯ ಜೊತೆ ಮಾತನಾಡಿರುವ ಆರೋಪಿ ಸಂತೋಷ್‌, “ನನಗೆ ಹೆದರಿಕೆಯೇನೂ ಆಗುತ್ತಿಲ್ಲ. ಆದರೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮನೆಗೆ ಬೆಂಕಿ ಇಡುವುದಾಗಿ, ಬಸ್‌ಸ್ಟ್ಯಾಂಡ್‌ನಲ್ಲಿ ನಿಲ್ಲಿಸಿ ಮೊಟ್ಟೆ ಸ್ನಾನ ಮಾಡಿಸುವುದಾಗಿ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾನೆ.

“ನೀವು ನಿಜವಾಗಿಯೂ ಯಾವ ಪಕ್ಷದವರು? ಜೆಡಿಎಸ್‌ನಲ್ಲಿದ್ದ ಜೀವಿಜಯ ಅವರ ಅನುಯಾಯಿ ಎಂದೂ ನೀವು ಹೇಳಿಕೊಂಡಿದ್ದೀರಿ? ನೀವು ನಿಜಕ್ಕೂ ಯಾವ ಪಕ್ಷದವರು?” ಎಂದು ಟಿ.ವಿ.9 ಪ್ರತಿನಿಧಿ ಕೇಳಿದಾಗ, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಕೇಸರಿ ವಸ್ತ್ರ ಧರಿಸಿ ಹಲವು ಕಾರ್ಯಕ್ರಮಗಳಲ್ಲಿ ಆತ ಭಾಗಿಯಾಗಿದ್ದಾನೆಂದು ಪ್ರತಿಪಾದಿಸಿದ ಹಲವಾರು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ ಮಟ್ಟು ಅವರು ಫೇಸ್‌ಬುಕ್‌ನಲ್ಲಿ, “ಈ ಮೊಟ್ಟೆಯ ಸಂಪತ್‌, ರಂಜನ್‌ ಅವರನ್ನು ಅಪ್ಪಚ್ಚಿ ಮಾಡಿಬಿಟ್ಟಿದ್ದಾನೆ” ಎಂಬ ಶೀರ್ಷಿಕೆಯೊಂದಿಗೆ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೀಗೆ ಆರೋಪಿ ಸಂಪತ್ ಸುತ್ತ ಹಲವು ಸುದ್ದಿಗಳು ಹುಟ್ಟಿಕೊಂಡಿವೆ. ಆತ ಮೂಲತಃ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ ಎಂಬ ಗೊಂದಲಗಳು ಹುಟ್ಟಿಕೊಂಡಿವೆ. ಆದರೆ ದುಷ್ಕೃತ್ಯ ನಡೆಸಿ ಆತ ಪೇಚಿಗೆ ಸಿಲುಕಿರುವುದಂತೂ ಮೇಲು ನೋಟಕ್ಕೆ ಸ್ಪಷ್ಟವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...