Homeಕರ್ನಾಟಕಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

ಪಿರಿಯಾಪಟ್ಟಣ ತಾಲೂಕಿನ ಮಾಲಂಗಿಗೆ ಹೋದಾಗ, ಮೊದಲು ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದೆ. ಆ ಸುಸಜ್ಜಿತ ಕಚೇರಿ ಕಂಡು ಅಚ್ಚರಿಯಾಯಿತು. ಗ್ರಾಮ ಪಂಚಾಯ್ತಿಯ ಪ್ರತಿಯೊಂದು ದಾಖಲೆ, ಪ್ರತಿ ಪೈಸೆಯ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಪರಿಶೀಲಿಸುವಷ್ಟು ಕ್ರಮಬದ್ಧವಾಗಿತ್ತು. ಕಚೇರಿ ವೀಕ್ಷಿಸುತ್ತಿದ್ದಾಗ, ಶೋಭಾರಾಣಿ ಪಂಚಾಯ್ತಿಯ ಚಟುವಟಿಕೆಗಳ ಬಗ್ಗೆ ವಿವರಿಸುತ್ತಿದ್ದರು. ಗ್ರಾಮಸಭೆ, ಜನರ ಸಮ್ಮುಖದಲ್ಲೇ ಫಲಾನುಭವಿಗಳ ಆಯ್ಕೆ, ಯೋಜನೆಯ ಹಂಚಿಕೆ, ಪ್ರತಿ ಹಂತದಲ್ಲೂ ಸಮುದಾಯದ ಸಹಭಾಗಿತ್ವದಲ್ಲೇ ಗ್ರಾಮದ ಅಭಿವೃದ್ಧಿ ಕಾರ್ಯಕೈಗೊಂಡಿರುವುದನ್ನು ಅವರು ಉದಾಹರಣೆ ಸಹಿತ ಮಾಹಿತಿ ನೀಡುತ್ತಿದ್ದರು. ಅವರ ಮಾತುಗಳನ್ನು ಕೇಳುತ್ತಿದ್ದಾಗ, ಅಧಿಕಾರ ವಿಕೇಂದ್ರೀಕರಣದ ಫಲ ನಿಜಾರ್ಥದಲ್ಲಿ ಜನಸಾಮಾನ್ಯರ ಮಧ್ಯೆ ಹಂಚಿಕೆಯಾದ ಅನುಭವವಾಯಿತು.

ತಾನು ಸಂಗ್ರಹಿಸಿದ ತೆರಿಗೆ ಹಣದಲ್ಲಿ ಪಂಚಾಯ್ತಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮಾಲಂಗಿ ಗ್ರಾಮಪಂಚಾಯ್ತಿಯ ಶಕ್ತಿ ಅಡಗಿರುವುದು ಇಲ್ಲಿಯೇ. ಈ ಪಂಚಾಯ್ತಿ, ಮೊದಲು ಒತ್ತುವರಿಯಾಗಿದ್ದ 22 ಎಕರೆ ಸರಕಾರಿ ಜಾಗವನ್ನು ಜೇನುಕುರುಬ ಸಮುದಾಯದ ಹೋರಾಟಗಾರ್ತಿ ಜಾನಕಮ್ಮನ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ಇದೀಗ ಕಿತ್ತೂರು ರಾಣಿ ಮತ್ತು ಇಂದಿರಾಗಾಂಧಿ ವಸತಿಶಾಲೆಗಳಿವೆ. ಉಳಿದ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಲಾಗಿದೆ. ರೂ 1.25 ಲಕ್ಷದಷ್ಟಿದ್ದ ಪಂಚಾಯ್ತಿಯ ವಾರ್ಷಿಕ ಆದಾಯವನ್ನು ರೂ 15 ಲಕ್ಷಕ್ಕೆ ಏರಿಸಿದೆ. ಈ ಹಣವನ್ನು ಪಂಚಾಯ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ.

ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕೆಂದರೆ, ಹಣ ಬೇಕೇಬೇಕು. ಆದರೆ, ಈ ಪಂಚಾಯ್ತಿ ಹಣವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುದಕ್ಕೆ ಮಾದರಿಯನ್ನೇ ರೂಪಿಸಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಗಳ ಸರ್ವೆ ಮಾಡಿಸಿ, ಸರ್ಕಾರದಿಂದ ಏನೇನು ಸೌಲಭ್ಯಗಳಿವೆ ಎಂಬುದನ್ನು ಅರಿವು ಮೂಡಿಸುವ ಕೆಲಸವಾಯಿತು. ನಂತರದಲ್ಲಿ ಆ ಊರಿಗೆ ಏನೇನು ಕಾರ್ಯಗಳು ನಡೆಯಬೇಕೆಂಬ ಪಟ್ಟಿಯೂ ಸಿದ್ಧವಾಯಿತು.

ಈ ಮಧ್ಯೆ ಸ್ವಯಂಸೇವಾಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಶಿಬಿರ ನಡೆಸಿ, ಶೇ 100ರಷ್ಟು ಲಸಿಕೆ ಹಾಕಿಸುವ ಕಾರ್ಯವೂ ಪೂರ್ಣಗೊಂಡಿತು. ಕಾನೂನು ಅರಿವು ಶಿಬಿರಗಳು ನಡೆದವು. ದಾನಿಗಳನ್ನು ಹುಡುಕಿ, ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಬೇಕಾಗುವ ಮೂಲಸೌಲಭ್ಯಗಳನ್ನು ಕೊಡಿಸಲಾಯಿತು.

ಬೋರನಕಟ್ಟೆ ಹಾಡಿಯಲ್ಲಿ ಕಾಡಾನೆ ಹಾವಳಿ ತಡೆಗೆ ಸ್ವಯಂಸೇವಾಸಂಸ್ಥೆಯಿಂದ ಸೋಲಾರ್ ಬೀದಿದೀಪಗಳನ್ನು ಅಳವಡಿಸಲಾಗಿದೆ. ಈ ಭಾಗದ ತಂಬಾಕು ಬೆಳೆಗಳನ್ನು ಕೊಳ್ಳುವ ಐಟಿಸಿ ಕಂಪನಿಯಿಂದ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಕೆರೆಗಳ ಹೂಳೆತ್ತಿಸಲಾಗಿದೆ. ಮೆಂಡಾ ಫೌಂಡೇಷನ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಜತೆಗೆ, ಗ್ರಾಮ ಪಂಚಾಯ್ತಿಯಿಂದ ರೂ 30 ಸಾವಿರ ನೀಡಿ, 5 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕೊಡಿಸಲಾಗಿದೆ. ಇದೀಗ ಮಾಲಂಗಿ ಸಂಪೂರ್ಣ ಸೋಲಾರ್ ಗ್ರಾಮ.
‘ಶಿಕ್ಷಣಕ್ಕಾಗಿ ಬೆಳಕು’ ಯೋಜನೆಯಡಿ ಹಾಡಿಯ ಗುಡಿಸಲುಗಳಿಗೆ ಸೆಲ್ಕೊ ಸೋಲಾರ್ ಕಂಪನಿಯ ಸಹಯೋಗದೊಂದಿಗೆ ರೂ 1 ಲಕ್ಷ ವೆಚ್ಚದಲ್ಲಿ ಸೋಲಾರ್ ಲೈಟ್‍ಗಳನ್ನು ವಿತರಿಸಲಾಗಿದೆ. ಈ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪಂಚಾಯ್ತಿ ಶ್ರಮಿಸಿದೆ. ಒಂಬತ್ತು ಶಾಲೆಗಳಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳು, ಊಟದ ತಟ್ಟೆಗಳನ್ನು ವಿತರಿಸಲಾಗಿದೆ.

ಪಂಚಾಯ್ತಿಯಿಂದಲೇ ವಿಧವಾ, ವೃದ್ಧಾಪ್ಯ ವೇತನಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸಿಕೊಡಲಾಗಿದೆ.

ರೂ 19 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ, `ರಾಜೀವ ಗಾಂಧಿ ಸೇವಾಕೇಂದ್ರ’ ನಿರ್ಮಾಣ. ಜಿಲ್ಲಾ ಪಂಚಾಯ್ತಿಯ ಅನುದಾನದಿಂದ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಅನುವಾಗುವ ಆಟದ ಪರಿಕರಗಳು, ಪೀಠೋಪಕರಣಗಳ ಪೂರೈಕೆ. ಗ್ರಾಮೀಣ ಕ್ರೀಡೆಗಳ ಆಯೋಜನೆ.. ಇವೆಲ್ಲ ಅಭಿವೃದ್ಧಿ ಚಟುವಟಿಕೆಗಳ ಭಾಗವಾಗಿವೆ ಎನ್ನುತ್ತಾರೆ ಶೋಭಾರಾಣಿ.

ಇತ್ತೀಚೆಗೆ ಕಾನನ ಕೃಷಿಕ ಸಂಘದ ಮಹಿಳೆಯರು ‘ಕಾನನ ಸಮುದಾಯ ಬೀಜ ಬ್ಯಾಂಕ್’ ಆರಂಭಿಸಿದ್ದಾರೆ. ಮಾಲಂಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಈ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ಸೂಚಿಸಿವೆ. ಮಾತ್ರವಲ್ಲ, ರಾಜ್ಯ ಸರ್ಕಾರದಿಂದ ಎರಡು ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಅಲ್ಲದೆ ಬಯಲು ಶೌಚಮುಕ್ತ ಗ್ರಾಮಪಂಚಾಯ್ತಿ ಪುರಸ್ಕಾರವನ್ನೂ ಪಡೆದಿದೆ.
ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಕೊಡಮಾಡುವ `ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ -2018’ ರ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಪಂಚಾಯ್ತಿ ಮಾಲಂಗಿ. ಕಳೆದ ವರ್ಷ ಏಪ್ರಿಲ್ 24 ರಂದು ಮಧ್ಯಪ್ರದೇಶದ ಜಬಲ್‍ಪುರ್‍ನಲ್ಲಿ ಆಯೋಜಿಸಿದ `ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಶೋಭಾರಾಣಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇಡೀ ಮಾಲಂಗಿ ಗ್ರಾಮಪಂಚಾಯ್ತಿಯಲ್ಲಿ ಇಂಥದ್ದೊಂದು ಬದಲಾವಣೆ ತರಲು ಕಾರಣರಾಗಿದ್ದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಪರಿಶ್ರಮ ಎಂದು ಗ್ರಾಮಸ್ಥರು ಮತ್ತು ಪಂಚಾಯ್ತಿಯ ಪದಾಧಿಕಾರಿಗಳು ಅಭಿಪ್ರಾಯಪಡುತ್ತಾರೆ. ಶೋಭಾ ಅವರು ಎಂಎಸ್ಸಿ ಪದವೀಧರೆ, 2010 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಪಿಎಚ್‍ಡಿ ಪಡೆದಿದ್ದಾರೆ. ಜಾರ್ಖಂಡ್ ವಿಶ್ವವಿದ್ಯಾಲಯದ ರಾಧೇಶ್ಯಾಮ್ ಪ್ರತಿಷ್ಠಾನದಿಂದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಥ ಹಿನ್ನೆಲೆ ಮತ್ತು ತನ್ನ ಜ್ಞಾನ ಸಂಶೋಧನಾ ತಿಳಿವಳಿಕೆಯನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಅವರು ಪಂಚಾಯ್ತಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರ ಉನ್ನತ ಶಿಕ್ಷಣದ ಅರಿವು ಗ್ರಾಮಮಟ್ಟದಲ್ಲಿ ಸಮರ್ಥವಾಗಿ ಬಳಕೆಯಾಗಿದೆ. ಮಾಲಂಗಿಯನ್ನು ಮಾದರಿ ಗ್ರಾಮವನ್ನಾಗಿ ರೂಪಿಸಿದ ಶೋಭಾರಾಣಿ ಅವರು ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಹೊಸ ಗ್ರಾಮಪಂಚಾಯ್ತಿಯಲ್ಲೂ ಇಂಥದ್ದೇ ಹೊಸ ಮಾದರಿಗಳು ರೂಪುಗೊಳ್ಳಲಿ. ಅವರು ಈಗ ರೂಪಿಸಿರುವ ಮಾದರಿಯನ್ನು ಅರಿಯುವ ಪ್ರಯತ್ನವಾಗಲಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...