Homeಕರ್ನಾಟಕಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

ಪಿರಿಯಾಪಟ್ಟಣ ತಾಲೂಕಿನ ಮಾಲಂಗಿಗೆ ಹೋದಾಗ, ಮೊದಲು ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದೆ. ಆ ಸುಸಜ್ಜಿತ ಕಚೇರಿ ಕಂಡು ಅಚ್ಚರಿಯಾಯಿತು. ಗ್ರಾಮ ಪಂಚಾಯ್ತಿಯ ಪ್ರತಿಯೊಂದು ದಾಖಲೆ, ಪ್ರತಿ ಪೈಸೆಯ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಪರಿಶೀಲಿಸುವಷ್ಟು ಕ್ರಮಬದ್ಧವಾಗಿತ್ತು. ಕಚೇರಿ ವೀಕ್ಷಿಸುತ್ತಿದ್ದಾಗ, ಶೋಭಾರಾಣಿ ಪಂಚಾಯ್ತಿಯ ಚಟುವಟಿಕೆಗಳ ಬಗ್ಗೆ ವಿವರಿಸುತ್ತಿದ್ದರು. ಗ್ರಾಮಸಭೆ, ಜನರ ಸಮ್ಮುಖದಲ್ಲೇ ಫಲಾನುಭವಿಗಳ ಆಯ್ಕೆ, ಯೋಜನೆಯ ಹಂಚಿಕೆ, ಪ್ರತಿ ಹಂತದಲ್ಲೂ ಸಮುದಾಯದ ಸಹಭಾಗಿತ್ವದಲ್ಲೇ ಗ್ರಾಮದ ಅಭಿವೃದ್ಧಿ ಕಾರ್ಯಕೈಗೊಂಡಿರುವುದನ್ನು ಅವರು ಉದಾಹರಣೆ ಸಹಿತ ಮಾಹಿತಿ ನೀಡುತ್ತಿದ್ದರು. ಅವರ ಮಾತುಗಳನ್ನು ಕೇಳುತ್ತಿದ್ದಾಗ, ಅಧಿಕಾರ ವಿಕೇಂದ್ರೀಕರಣದ ಫಲ ನಿಜಾರ್ಥದಲ್ಲಿ ಜನಸಾಮಾನ್ಯರ ಮಧ್ಯೆ ಹಂಚಿಕೆಯಾದ ಅನುಭವವಾಯಿತು.

ತಾನು ಸಂಗ್ರಹಿಸಿದ ತೆರಿಗೆ ಹಣದಲ್ಲಿ ಪಂಚಾಯ್ತಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮಾಲಂಗಿ ಗ್ರಾಮಪಂಚಾಯ್ತಿಯ ಶಕ್ತಿ ಅಡಗಿರುವುದು ಇಲ್ಲಿಯೇ. ಈ ಪಂಚಾಯ್ತಿ, ಮೊದಲು ಒತ್ತುವರಿಯಾಗಿದ್ದ 22 ಎಕರೆ ಸರಕಾರಿ ಜಾಗವನ್ನು ಜೇನುಕುರುಬ ಸಮುದಾಯದ ಹೋರಾಟಗಾರ್ತಿ ಜಾನಕಮ್ಮನ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ಇದೀಗ ಕಿತ್ತೂರು ರಾಣಿ ಮತ್ತು ಇಂದಿರಾಗಾಂಧಿ ವಸತಿಶಾಲೆಗಳಿವೆ. ಉಳಿದ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಲಾಗಿದೆ. ರೂ 1.25 ಲಕ್ಷದಷ್ಟಿದ್ದ ಪಂಚಾಯ್ತಿಯ ವಾರ್ಷಿಕ ಆದಾಯವನ್ನು ರೂ 15 ಲಕ್ಷಕ್ಕೆ ಏರಿಸಿದೆ. ಈ ಹಣವನ್ನು ಪಂಚಾಯ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ.

ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕೆಂದರೆ, ಹಣ ಬೇಕೇಬೇಕು. ಆದರೆ, ಈ ಪಂಚಾಯ್ತಿ ಹಣವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುದಕ್ಕೆ ಮಾದರಿಯನ್ನೇ ರೂಪಿಸಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಗಳ ಸರ್ವೆ ಮಾಡಿಸಿ, ಸರ್ಕಾರದಿಂದ ಏನೇನು ಸೌಲಭ್ಯಗಳಿವೆ ಎಂಬುದನ್ನು ಅರಿವು ಮೂಡಿಸುವ ಕೆಲಸವಾಯಿತು. ನಂತರದಲ್ಲಿ ಆ ಊರಿಗೆ ಏನೇನು ಕಾರ್ಯಗಳು ನಡೆಯಬೇಕೆಂಬ ಪಟ್ಟಿಯೂ ಸಿದ್ಧವಾಯಿತು.

ಈ ಮಧ್ಯೆ ಸ್ವಯಂಸೇವಾಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಶಿಬಿರ ನಡೆಸಿ, ಶೇ 100ರಷ್ಟು ಲಸಿಕೆ ಹಾಕಿಸುವ ಕಾರ್ಯವೂ ಪೂರ್ಣಗೊಂಡಿತು. ಕಾನೂನು ಅರಿವು ಶಿಬಿರಗಳು ನಡೆದವು. ದಾನಿಗಳನ್ನು ಹುಡುಕಿ, ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಬೇಕಾಗುವ ಮೂಲಸೌಲಭ್ಯಗಳನ್ನು ಕೊಡಿಸಲಾಯಿತು.

ಬೋರನಕಟ್ಟೆ ಹಾಡಿಯಲ್ಲಿ ಕಾಡಾನೆ ಹಾವಳಿ ತಡೆಗೆ ಸ್ವಯಂಸೇವಾಸಂಸ್ಥೆಯಿಂದ ಸೋಲಾರ್ ಬೀದಿದೀಪಗಳನ್ನು ಅಳವಡಿಸಲಾಗಿದೆ. ಈ ಭಾಗದ ತಂಬಾಕು ಬೆಳೆಗಳನ್ನು ಕೊಳ್ಳುವ ಐಟಿಸಿ ಕಂಪನಿಯಿಂದ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಕೆರೆಗಳ ಹೂಳೆತ್ತಿಸಲಾಗಿದೆ. ಮೆಂಡಾ ಫೌಂಡೇಷನ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಜತೆಗೆ, ಗ್ರಾಮ ಪಂಚಾಯ್ತಿಯಿಂದ ರೂ 30 ಸಾವಿರ ನೀಡಿ, 5 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕೊಡಿಸಲಾಗಿದೆ. ಇದೀಗ ಮಾಲಂಗಿ ಸಂಪೂರ್ಣ ಸೋಲಾರ್ ಗ್ರಾಮ.
‘ಶಿಕ್ಷಣಕ್ಕಾಗಿ ಬೆಳಕು’ ಯೋಜನೆಯಡಿ ಹಾಡಿಯ ಗುಡಿಸಲುಗಳಿಗೆ ಸೆಲ್ಕೊ ಸೋಲಾರ್ ಕಂಪನಿಯ ಸಹಯೋಗದೊಂದಿಗೆ ರೂ 1 ಲಕ್ಷ ವೆಚ್ಚದಲ್ಲಿ ಸೋಲಾರ್ ಲೈಟ್‍ಗಳನ್ನು ವಿತರಿಸಲಾಗಿದೆ. ಈ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪಂಚಾಯ್ತಿ ಶ್ರಮಿಸಿದೆ. ಒಂಬತ್ತು ಶಾಲೆಗಳಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳು, ಊಟದ ತಟ್ಟೆಗಳನ್ನು ವಿತರಿಸಲಾಗಿದೆ.

ಪಂಚಾಯ್ತಿಯಿಂದಲೇ ವಿಧವಾ, ವೃದ್ಧಾಪ್ಯ ವೇತನಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸಿಕೊಡಲಾಗಿದೆ.

ರೂ 19 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ, `ರಾಜೀವ ಗಾಂಧಿ ಸೇವಾಕೇಂದ್ರ’ ನಿರ್ಮಾಣ. ಜಿಲ್ಲಾ ಪಂಚಾಯ್ತಿಯ ಅನುದಾನದಿಂದ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಅನುವಾಗುವ ಆಟದ ಪರಿಕರಗಳು, ಪೀಠೋಪಕರಣಗಳ ಪೂರೈಕೆ. ಗ್ರಾಮೀಣ ಕ್ರೀಡೆಗಳ ಆಯೋಜನೆ.. ಇವೆಲ್ಲ ಅಭಿವೃದ್ಧಿ ಚಟುವಟಿಕೆಗಳ ಭಾಗವಾಗಿವೆ ಎನ್ನುತ್ತಾರೆ ಶೋಭಾರಾಣಿ.

ಇತ್ತೀಚೆಗೆ ಕಾನನ ಕೃಷಿಕ ಸಂಘದ ಮಹಿಳೆಯರು ‘ಕಾನನ ಸಮುದಾಯ ಬೀಜ ಬ್ಯಾಂಕ್’ ಆರಂಭಿಸಿದ್ದಾರೆ. ಮಾಲಂಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಈ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ಸೂಚಿಸಿವೆ. ಮಾತ್ರವಲ್ಲ, ರಾಜ್ಯ ಸರ್ಕಾರದಿಂದ ಎರಡು ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಅಲ್ಲದೆ ಬಯಲು ಶೌಚಮುಕ್ತ ಗ್ರಾಮಪಂಚಾಯ್ತಿ ಪುರಸ್ಕಾರವನ್ನೂ ಪಡೆದಿದೆ.
ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಕೊಡಮಾಡುವ `ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ -2018’ ರ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಪಂಚಾಯ್ತಿ ಮಾಲಂಗಿ. ಕಳೆದ ವರ್ಷ ಏಪ್ರಿಲ್ 24 ರಂದು ಮಧ್ಯಪ್ರದೇಶದ ಜಬಲ್‍ಪುರ್‍ನಲ್ಲಿ ಆಯೋಜಿಸಿದ `ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಶೋಭಾರಾಣಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇಡೀ ಮಾಲಂಗಿ ಗ್ರಾಮಪಂಚಾಯ್ತಿಯಲ್ಲಿ ಇಂಥದ್ದೊಂದು ಬದಲಾವಣೆ ತರಲು ಕಾರಣರಾಗಿದ್ದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಪರಿಶ್ರಮ ಎಂದು ಗ್ರಾಮಸ್ಥರು ಮತ್ತು ಪಂಚಾಯ್ತಿಯ ಪದಾಧಿಕಾರಿಗಳು ಅಭಿಪ್ರಾಯಪಡುತ್ತಾರೆ. ಶೋಭಾ ಅವರು ಎಂಎಸ್ಸಿ ಪದವೀಧರೆ, 2010 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಪಿಎಚ್‍ಡಿ ಪಡೆದಿದ್ದಾರೆ. ಜಾರ್ಖಂಡ್ ವಿಶ್ವವಿದ್ಯಾಲಯದ ರಾಧೇಶ್ಯಾಮ್ ಪ್ರತಿಷ್ಠಾನದಿಂದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಥ ಹಿನ್ನೆಲೆ ಮತ್ತು ತನ್ನ ಜ್ಞಾನ ಸಂಶೋಧನಾ ತಿಳಿವಳಿಕೆಯನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಅವರು ಪಂಚಾಯ್ತಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರ ಉನ್ನತ ಶಿಕ್ಷಣದ ಅರಿವು ಗ್ರಾಮಮಟ್ಟದಲ್ಲಿ ಸಮರ್ಥವಾಗಿ ಬಳಕೆಯಾಗಿದೆ. ಮಾಲಂಗಿಯನ್ನು ಮಾದರಿ ಗ್ರಾಮವನ್ನಾಗಿ ರೂಪಿಸಿದ ಶೋಭಾರಾಣಿ ಅವರು ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಹೊಸ ಗ್ರಾಮಪಂಚಾಯ್ತಿಯಲ್ಲೂ ಇಂಥದ್ದೇ ಹೊಸ ಮಾದರಿಗಳು ರೂಪುಗೊಳ್ಳಲಿ. ಅವರು ಈಗ ರೂಪಿಸಿರುವ ಮಾದರಿಯನ್ನು ಅರಿಯುವ ಪ್ರಯತ್ನವಾಗಲಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...