Homeಕರ್ನಾಟಕಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

ಪಿರಿಯಾಪಟ್ಟಣ ತಾಲೂಕಿನ ಮಾಲಂಗಿಗೆ ಹೋದಾಗ, ಮೊದಲು ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದೆ. ಆ ಸುಸಜ್ಜಿತ ಕಚೇರಿ ಕಂಡು ಅಚ್ಚರಿಯಾಯಿತು. ಗ್ರಾಮ ಪಂಚಾಯ್ತಿಯ ಪ್ರತಿಯೊಂದು ದಾಖಲೆ, ಪ್ರತಿ ಪೈಸೆಯ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಪರಿಶೀಲಿಸುವಷ್ಟು ಕ್ರಮಬದ್ಧವಾಗಿತ್ತು. ಕಚೇರಿ ವೀಕ್ಷಿಸುತ್ತಿದ್ದಾಗ, ಶೋಭಾರಾಣಿ ಪಂಚಾಯ್ತಿಯ ಚಟುವಟಿಕೆಗಳ ಬಗ್ಗೆ ವಿವರಿಸುತ್ತಿದ್ದರು. ಗ್ರಾಮಸಭೆ, ಜನರ ಸಮ್ಮುಖದಲ್ಲೇ ಫಲಾನುಭವಿಗಳ ಆಯ್ಕೆ, ಯೋಜನೆಯ ಹಂಚಿಕೆ, ಪ್ರತಿ ಹಂತದಲ್ಲೂ ಸಮುದಾಯದ ಸಹಭಾಗಿತ್ವದಲ್ಲೇ ಗ್ರಾಮದ ಅಭಿವೃದ್ಧಿ ಕಾರ್ಯಕೈಗೊಂಡಿರುವುದನ್ನು ಅವರು ಉದಾಹರಣೆ ಸಹಿತ ಮಾಹಿತಿ ನೀಡುತ್ತಿದ್ದರು. ಅವರ ಮಾತುಗಳನ್ನು ಕೇಳುತ್ತಿದ್ದಾಗ, ಅಧಿಕಾರ ವಿಕೇಂದ್ರೀಕರಣದ ಫಲ ನಿಜಾರ್ಥದಲ್ಲಿ ಜನಸಾಮಾನ್ಯರ ಮಧ್ಯೆ ಹಂಚಿಕೆಯಾದ ಅನುಭವವಾಯಿತು.

ತಾನು ಸಂಗ್ರಹಿಸಿದ ತೆರಿಗೆ ಹಣದಲ್ಲಿ ಪಂಚಾಯ್ತಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮಾಲಂಗಿ ಗ್ರಾಮಪಂಚಾಯ್ತಿಯ ಶಕ್ತಿ ಅಡಗಿರುವುದು ಇಲ್ಲಿಯೇ. ಈ ಪಂಚಾಯ್ತಿ, ಮೊದಲು ಒತ್ತುವರಿಯಾಗಿದ್ದ 22 ಎಕರೆ ಸರಕಾರಿ ಜಾಗವನ್ನು ಜೇನುಕುರುಬ ಸಮುದಾಯದ ಹೋರಾಟಗಾರ್ತಿ ಜಾನಕಮ್ಮನ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ಇದೀಗ ಕಿತ್ತೂರು ರಾಣಿ ಮತ್ತು ಇಂದಿರಾಗಾಂಧಿ ವಸತಿಶಾಲೆಗಳಿವೆ. ಉಳಿದ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಲಾಗಿದೆ. ರೂ 1.25 ಲಕ್ಷದಷ್ಟಿದ್ದ ಪಂಚಾಯ್ತಿಯ ವಾರ್ಷಿಕ ಆದಾಯವನ್ನು ರೂ 15 ಲಕ್ಷಕ್ಕೆ ಏರಿಸಿದೆ. ಈ ಹಣವನ್ನು ಪಂಚಾಯ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ.

ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕೆಂದರೆ, ಹಣ ಬೇಕೇಬೇಕು. ಆದರೆ, ಈ ಪಂಚಾಯ್ತಿ ಹಣವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುದಕ್ಕೆ ಮಾದರಿಯನ್ನೇ ರೂಪಿಸಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಗಳ ಸರ್ವೆ ಮಾಡಿಸಿ, ಸರ್ಕಾರದಿಂದ ಏನೇನು ಸೌಲಭ್ಯಗಳಿವೆ ಎಂಬುದನ್ನು ಅರಿವು ಮೂಡಿಸುವ ಕೆಲಸವಾಯಿತು. ನಂತರದಲ್ಲಿ ಆ ಊರಿಗೆ ಏನೇನು ಕಾರ್ಯಗಳು ನಡೆಯಬೇಕೆಂಬ ಪಟ್ಟಿಯೂ ಸಿದ್ಧವಾಯಿತು.

ಈ ಮಧ್ಯೆ ಸ್ವಯಂಸೇವಾಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಶಿಬಿರ ನಡೆಸಿ, ಶೇ 100ರಷ್ಟು ಲಸಿಕೆ ಹಾಕಿಸುವ ಕಾರ್ಯವೂ ಪೂರ್ಣಗೊಂಡಿತು. ಕಾನೂನು ಅರಿವು ಶಿಬಿರಗಳು ನಡೆದವು. ದಾನಿಗಳನ್ನು ಹುಡುಕಿ, ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಬೇಕಾಗುವ ಮೂಲಸೌಲಭ್ಯಗಳನ್ನು ಕೊಡಿಸಲಾಯಿತು.

ಬೋರನಕಟ್ಟೆ ಹಾಡಿಯಲ್ಲಿ ಕಾಡಾನೆ ಹಾವಳಿ ತಡೆಗೆ ಸ್ವಯಂಸೇವಾಸಂಸ್ಥೆಯಿಂದ ಸೋಲಾರ್ ಬೀದಿದೀಪಗಳನ್ನು ಅಳವಡಿಸಲಾಗಿದೆ. ಈ ಭಾಗದ ತಂಬಾಕು ಬೆಳೆಗಳನ್ನು ಕೊಳ್ಳುವ ಐಟಿಸಿ ಕಂಪನಿಯಿಂದ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಕೆರೆಗಳ ಹೂಳೆತ್ತಿಸಲಾಗಿದೆ. ಮೆಂಡಾ ಫೌಂಡೇಷನ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಜತೆಗೆ, ಗ್ರಾಮ ಪಂಚಾಯ್ತಿಯಿಂದ ರೂ 30 ಸಾವಿರ ನೀಡಿ, 5 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕೊಡಿಸಲಾಗಿದೆ. ಇದೀಗ ಮಾಲಂಗಿ ಸಂಪೂರ್ಣ ಸೋಲಾರ್ ಗ್ರಾಮ.
‘ಶಿಕ್ಷಣಕ್ಕಾಗಿ ಬೆಳಕು’ ಯೋಜನೆಯಡಿ ಹಾಡಿಯ ಗುಡಿಸಲುಗಳಿಗೆ ಸೆಲ್ಕೊ ಸೋಲಾರ್ ಕಂಪನಿಯ ಸಹಯೋಗದೊಂದಿಗೆ ರೂ 1 ಲಕ್ಷ ವೆಚ್ಚದಲ್ಲಿ ಸೋಲಾರ್ ಲೈಟ್‍ಗಳನ್ನು ವಿತರಿಸಲಾಗಿದೆ. ಈ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪಂಚಾಯ್ತಿ ಶ್ರಮಿಸಿದೆ. ಒಂಬತ್ತು ಶಾಲೆಗಳಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳು, ಊಟದ ತಟ್ಟೆಗಳನ್ನು ವಿತರಿಸಲಾಗಿದೆ.

ಪಂಚಾಯ್ತಿಯಿಂದಲೇ ವಿಧವಾ, ವೃದ್ಧಾಪ್ಯ ವೇತನಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸಿಕೊಡಲಾಗಿದೆ.

ರೂ 19 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ, `ರಾಜೀವ ಗಾಂಧಿ ಸೇವಾಕೇಂದ್ರ’ ನಿರ್ಮಾಣ. ಜಿಲ್ಲಾ ಪಂಚಾಯ್ತಿಯ ಅನುದಾನದಿಂದ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಅನುವಾಗುವ ಆಟದ ಪರಿಕರಗಳು, ಪೀಠೋಪಕರಣಗಳ ಪೂರೈಕೆ. ಗ್ರಾಮೀಣ ಕ್ರೀಡೆಗಳ ಆಯೋಜನೆ.. ಇವೆಲ್ಲ ಅಭಿವೃದ್ಧಿ ಚಟುವಟಿಕೆಗಳ ಭಾಗವಾಗಿವೆ ಎನ್ನುತ್ತಾರೆ ಶೋಭಾರಾಣಿ.

ಇತ್ತೀಚೆಗೆ ಕಾನನ ಕೃಷಿಕ ಸಂಘದ ಮಹಿಳೆಯರು ‘ಕಾನನ ಸಮುದಾಯ ಬೀಜ ಬ್ಯಾಂಕ್’ ಆರಂಭಿಸಿದ್ದಾರೆ. ಮಾಲಂಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಈ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ಸೂಚಿಸಿವೆ. ಮಾತ್ರವಲ್ಲ, ರಾಜ್ಯ ಸರ್ಕಾರದಿಂದ ಎರಡು ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಅಲ್ಲದೆ ಬಯಲು ಶೌಚಮುಕ್ತ ಗ್ರಾಮಪಂಚಾಯ್ತಿ ಪುರಸ್ಕಾರವನ್ನೂ ಪಡೆದಿದೆ.
ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಕೊಡಮಾಡುವ `ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ -2018’ ರ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಪಂಚಾಯ್ತಿ ಮಾಲಂಗಿ. ಕಳೆದ ವರ್ಷ ಏಪ್ರಿಲ್ 24 ರಂದು ಮಧ್ಯಪ್ರದೇಶದ ಜಬಲ್‍ಪುರ್‍ನಲ್ಲಿ ಆಯೋಜಿಸಿದ `ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಶೋಭಾರಾಣಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇಡೀ ಮಾಲಂಗಿ ಗ್ರಾಮಪಂಚಾಯ್ತಿಯಲ್ಲಿ ಇಂಥದ್ದೊಂದು ಬದಲಾವಣೆ ತರಲು ಕಾರಣರಾಗಿದ್ದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಪರಿಶ್ರಮ ಎಂದು ಗ್ರಾಮಸ್ಥರು ಮತ್ತು ಪಂಚಾಯ್ತಿಯ ಪದಾಧಿಕಾರಿಗಳು ಅಭಿಪ್ರಾಯಪಡುತ್ತಾರೆ. ಶೋಭಾ ಅವರು ಎಂಎಸ್ಸಿ ಪದವೀಧರೆ, 2010 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಪಿಎಚ್‍ಡಿ ಪಡೆದಿದ್ದಾರೆ. ಜಾರ್ಖಂಡ್ ವಿಶ್ವವಿದ್ಯಾಲಯದ ರಾಧೇಶ್ಯಾಮ್ ಪ್ರತಿಷ್ಠಾನದಿಂದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಥ ಹಿನ್ನೆಲೆ ಮತ್ತು ತನ್ನ ಜ್ಞಾನ ಸಂಶೋಧನಾ ತಿಳಿವಳಿಕೆಯನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಅವರು ಪಂಚಾಯ್ತಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರ ಉನ್ನತ ಶಿಕ್ಷಣದ ಅರಿವು ಗ್ರಾಮಮಟ್ಟದಲ್ಲಿ ಸಮರ್ಥವಾಗಿ ಬಳಕೆಯಾಗಿದೆ. ಮಾಲಂಗಿಯನ್ನು ಮಾದರಿ ಗ್ರಾಮವನ್ನಾಗಿ ರೂಪಿಸಿದ ಶೋಭಾರಾಣಿ ಅವರು ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಹೊಸ ಗ್ರಾಮಪಂಚಾಯ್ತಿಯಲ್ಲೂ ಇಂಥದ್ದೇ ಹೊಸ ಮಾದರಿಗಳು ರೂಪುಗೊಳ್ಳಲಿ. ಅವರು ಈಗ ರೂಪಿಸಿರುವ ಮಾದರಿಯನ್ನು ಅರಿಯುವ ಪ್ರಯತ್ನವಾಗಲಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...