Homeಕರ್ನಾಟಕಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

ಪಿರಿಯಾಪಟ್ಟಣ ತಾಲೂಕಿನ ಮಾಲಂಗಿಗೆ ಹೋದಾಗ, ಮೊದಲು ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದೆ. ಆ ಸುಸಜ್ಜಿತ ಕಚೇರಿ ಕಂಡು ಅಚ್ಚರಿಯಾಯಿತು. ಗ್ರಾಮ ಪಂಚಾಯ್ತಿಯ ಪ್ರತಿಯೊಂದು ದಾಖಲೆ, ಪ್ರತಿ ಪೈಸೆಯ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಪರಿಶೀಲಿಸುವಷ್ಟು ಕ್ರಮಬದ್ಧವಾಗಿತ್ತು. ಕಚೇರಿ ವೀಕ್ಷಿಸುತ್ತಿದ್ದಾಗ, ಶೋಭಾರಾಣಿ ಪಂಚಾಯ್ತಿಯ ಚಟುವಟಿಕೆಗಳ ಬಗ್ಗೆ ವಿವರಿಸುತ್ತಿದ್ದರು. ಗ್ರಾಮಸಭೆ, ಜನರ ಸಮ್ಮುಖದಲ್ಲೇ ಫಲಾನುಭವಿಗಳ ಆಯ್ಕೆ, ಯೋಜನೆಯ ಹಂಚಿಕೆ, ಪ್ರತಿ ಹಂತದಲ್ಲೂ ಸಮುದಾಯದ ಸಹಭಾಗಿತ್ವದಲ್ಲೇ ಗ್ರಾಮದ ಅಭಿವೃದ್ಧಿ ಕಾರ್ಯಕೈಗೊಂಡಿರುವುದನ್ನು ಅವರು ಉದಾಹರಣೆ ಸಹಿತ ಮಾಹಿತಿ ನೀಡುತ್ತಿದ್ದರು. ಅವರ ಮಾತುಗಳನ್ನು ಕೇಳುತ್ತಿದ್ದಾಗ, ಅಧಿಕಾರ ವಿಕೇಂದ್ರೀಕರಣದ ಫಲ ನಿಜಾರ್ಥದಲ್ಲಿ ಜನಸಾಮಾನ್ಯರ ಮಧ್ಯೆ ಹಂಚಿಕೆಯಾದ ಅನುಭವವಾಯಿತು.

ತಾನು ಸಂಗ್ರಹಿಸಿದ ತೆರಿಗೆ ಹಣದಲ್ಲಿ ಪಂಚಾಯ್ತಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮಾಲಂಗಿ ಗ್ರಾಮಪಂಚಾಯ್ತಿಯ ಶಕ್ತಿ ಅಡಗಿರುವುದು ಇಲ್ಲಿಯೇ. ಈ ಪಂಚಾಯ್ತಿ, ಮೊದಲು ಒತ್ತುವರಿಯಾಗಿದ್ದ 22 ಎಕರೆ ಸರಕಾರಿ ಜಾಗವನ್ನು ಜೇನುಕುರುಬ ಸಮುದಾಯದ ಹೋರಾಟಗಾರ್ತಿ ಜಾನಕಮ್ಮನ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ಇದೀಗ ಕಿತ್ತೂರು ರಾಣಿ ಮತ್ತು ಇಂದಿರಾಗಾಂಧಿ ವಸತಿಶಾಲೆಗಳಿವೆ. ಉಳಿದ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಲಾಗಿದೆ. ರೂ 1.25 ಲಕ್ಷದಷ್ಟಿದ್ದ ಪಂಚಾಯ್ತಿಯ ವಾರ್ಷಿಕ ಆದಾಯವನ್ನು ರೂ 15 ಲಕ್ಷಕ್ಕೆ ಏರಿಸಿದೆ. ಈ ಹಣವನ್ನು ಪಂಚಾಯ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ.

ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕೆಂದರೆ, ಹಣ ಬೇಕೇಬೇಕು. ಆದರೆ, ಈ ಪಂಚಾಯ್ತಿ ಹಣವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುದಕ್ಕೆ ಮಾದರಿಯನ್ನೇ ರೂಪಿಸಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಗಳ ಸರ್ವೆ ಮಾಡಿಸಿ, ಸರ್ಕಾರದಿಂದ ಏನೇನು ಸೌಲಭ್ಯಗಳಿವೆ ಎಂಬುದನ್ನು ಅರಿವು ಮೂಡಿಸುವ ಕೆಲಸವಾಯಿತು. ನಂತರದಲ್ಲಿ ಆ ಊರಿಗೆ ಏನೇನು ಕಾರ್ಯಗಳು ನಡೆಯಬೇಕೆಂಬ ಪಟ್ಟಿಯೂ ಸಿದ್ಧವಾಯಿತು.

ಈ ಮಧ್ಯೆ ಸ್ವಯಂಸೇವಾಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಶಿಬಿರ ನಡೆಸಿ, ಶೇ 100ರಷ್ಟು ಲಸಿಕೆ ಹಾಕಿಸುವ ಕಾರ್ಯವೂ ಪೂರ್ಣಗೊಂಡಿತು. ಕಾನೂನು ಅರಿವು ಶಿಬಿರಗಳು ನಡೆದವು. ದಾನಿಗಳನ್ನು ಹುಡುಕಿ, ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಬೇಕಾಗುವ ಮೂಲಸೌಲಭ್ಯಗಳನ್ನು ಕೊಡಿಸಲಾಯಿತು.

ಬೋರನಕಟ್ಟೆ ಹಾಡಿಯಲ್ಲಿ ಕಾಡಾನೆ ಹಾವಳಿ ತಡೆಗೆ ಸ್ವಯಂಸೇವಾಸಂಸ್ಥೆಯಿಂದ ಸೋಲಾರ್ ಬೀದಿದೀಪಗಳನ್ನು ಅಳವಡಿಸಲಾಗಿದೆ. ಈ ಭಾಗದ ತಂಬಾಕು ಬೆಳೆಗಳನ್ನು ಕೊಳ್ಳುವ ಐಟಿಸಿ ಕಂಪನಿಯಿಂದ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಕೆರೆಗಳ ಹೂಳೆತ್ತಿಸಲಾಗಿದೆ. ಮೆಂಡಾ ಫೌಂಡೇಷನ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಜತೆಗೆ, ಗ್ರಾಮ ಪಂಚಾಯ್ತಿಯಿಂದ ರೂ 30 ಸಾವಿರ ನೀಡಿ, 5 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕೊಡಿಸಲಾಗಿದೆ. ಇದೀಗ ಮಾಲಂಗಿ ಸಂಪೂರ್ಣ ಸೋಲಾರ್ ಗ್ರಾಮ.
‘ಶಿಕ್ಷಣಕ್ಕಾಗಿ ಬೆಳಕು’ ಯೋಜನೆಯಡಿ ಹಾಡಿಯ ಗುಡಿಸಲುಗಳಿಗೆ ಸೆಲ್ಕೊ ಸೋಲಾರ್ ಕಂಪನಿಯ ಸಹಯೋಗದೊಂದಿಗೆ ರೂ 1 ಲಕ್ಷ ವೆಚ್ಚದಲ್ಲಿ ಸೋಲಾರ್ ಲೈಟ್‍ಗಳನ್ನು ವಿತರಿಸಲಾಗಿದೆ. ಈ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪಂಚಾಯ್ತಿ ಶ್ರಮಿಸಿದೆ. ಒಂಬತ್ತು ಶಾಲೆಗಳಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳು, ಊಟದ ತಟ್ಟೆಗಳನ್ನು ವಿತರಿಸಲಾಗಿದೆ.

ಪಂಚಾಯ್ತಿಯಿಂದಲೇ ವಿಧವಾ, ವೃದ್ಧಾಪ್ಯ ವೇತನಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸಿಕೊಡಲಾಗಿದೆ.

ರೂ 19 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ, `ರಾಜೀವ ಗಾಂಧಿ ಸೇವಾಕೇಂದ್ರ’ ನಿರ್ಮಾಣ. ಜಿಲ್ಲಾ ಪಂಚಾಯ್ತಿಯ ಅನುದಾನದಿಂದ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಅನುವಾಗುವ ಆಟದ ಪರಿಕರಗಳು, ಪೀಠೋಪಕರಣಗಳ ಪೂರೈಕೆ. ಗ್ರಾಮೀಣ ಕ್ರೀಡೆಗಳ ಆಯೋಜನೆ.. ಇವೆಲ್ಲ ಅಭಿವೃದ್ಧಿ ಚಟುವಟಿಕೆಗಳ ಭಾಗವಾಗಿವೆ ಎನ್ನುತ್ತಾರೆ ಶೋಭಾರಾಣಿ.

ಇತ್ತೀಚೆಗೆ ಕಾನನ ಕೃಷಿಕ ಸಂಘದ ಮಹಿಳೆಯರು ‘ಕಾನನ ಸಮುದಾಯ ಬೀಜ ಬ್ಯಾಂಕ್’ ಆರಂಭಿಸಿದ್ದಾರೆ. ಮಾಲಂಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಈ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ಸೂಚಿಸಿವೆ. ಮಾತ್ರವಲ್ಲ, ರಾಜ್ಯ ಸರ್ಕಾರದಿಂದ ಎರಡು ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಅಲ್ಲದೆ ಬಯಲು ಶೌಚಮುಕ್ತ ಗ್ರಾಮಪಂಚಾಯ್ತಿ ಪುರಸ್ಕಾರವನ್ನೂ ಪಡೆದಿದೆ.
ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಕೊಡಮಾಡುವ `ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ -2018’ ರ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಪಂಚಾಯ್ತಿ ಮಾಲಂಗಿ. ಕಳೆದ ವರ್ಷ ಏಪ್ರಿಲ್ 24 ರಂದು ಮಧ್ಯಪ್ರದೇಶದ ಜಬಲ್‍ಪುರ್‍ನಲ್ಲಿ ಆಯೋಜಿಸಿದ `ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಶೋಭಾರಾಣಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇಡೀ ಮಾಲಂಗಿ ಗ್ರಾಮಪಂಚಾಯ್ತಿಯಲ್ಲಿ ಇಂಥದ್ದೊಂದು ಬದಲಾವಣೆ ತರಲು ಕಾರಣರಾಗಿದ್ದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಪರಿಶ್ರಮ ಎಂದು ಗ್ರಾಮಸ್ಥರು ಮತ್ತು ಪಂಚಾಯ್ತಿಯ ಪದಾಧಿಕಾರಿಗಳು ಅಭಿಪ್ರಾಯಪಡುತ್ತಾರೆ. ಶೋಭಾ ಅವರು ಎಂಎಸ್ಸಿ ಪದವೀಧರೆ, 2010 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಪಿಎಚ್‍ಡಿ ಪಡೆದಿದ್ದಾರೆ. ಜಾರ್ಖಂಡ್ ವಿಶ್ವವಿದ್ಯಾಲಯದ ರಾಧೇಶ್ಯಾಮ್ ಪ್ರತಿಷ್ಠಾನದಿಂದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಥ ಹಿನ್ನೆಲೆ ಮತ್ತು ತನ್ನ ಜ್ಞಾನ ಸಂಶೋಧನಾ ತಿಳಿವಳಿಕೆಯನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಅವರು ಪಂಚಾಯ್ತಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರ ಉನ್ನತ ಶಿಕ್ಷಣದ ಅರಿವು ಗ್ರಾಮಮಟ್ಟದಲ್ಲಿ ಸಮರ್ಥವಾಗಿ ಬಳಕೆಯಾಗಿದೆ. ಮಾಲಂಗಿಯನ್ನು ಮಾದರಿ ಗ್ರಾಮವನ್ನಾಗಿ ರೂಪಿಸಿದ ಶೋಭಾರಾಣಿ ಅವರು ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಹೊಸ ಗ್ರಾಮಪಂಚಾಯ್ತಿಯಲ್ಲೂ ಇಂಥದ್ದೇ ಹೊಸ ಮಾದರಿಗಳು ರೂಪುಗೊಳ್ಳಲಿ. ಅವರು ಈಗ ರೂಪಿಸಿರುವ ಮಾದರಿಯನ್ನು ಅರಿಯುವ ಪ್ರಯತ್ನವಾಗಲಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...