Homeಕರ್ನಾಟಕಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

ಪಿರಿಯಾಪಟ್ಟಣ ತಾಲೂಕಿನ ಮಾಲಂಗಿಗೆ ಹೋದಾಗ, ಮೊದಲು ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದೆ. ಆ ಸುಸಜ್ಜಿತ ಕಚೇರಿ ಕಂಡು ಅಚ್ಚರಿಯಾಯಿತು. ಗ್ರಾಮ ಪಂಚಾಯ್ತಿಯ ಪ್ರತಿಯೊಂದು ದಾಖಲೆ, ಪ್ರತಿ ಪೈಸೆಯ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಪರಿಶೀಲಿಸುವಷ್ಟು ಕ್ರಮಬದ್ಧವಾಗಿತ್ತು. ಕಚೇರಿ ವೀಕ್ಷಿಸುತ್ತಿದ್ದಾಗ, ಶೋಭಾರಾಣಿ ಪಂಚಾಯ್ತಿಯ ಚಟುವಟಿಕೆಗಳ ಬಗ್ಗೆ ವಿವರಿಸುತ್ತಿದ್ದರು. ಗ್ರಾಮಸಭೆ, ಜನರ ಸಮ್ಮುಖದಲ್ಲೇ ಫಲಾನುಭವಿಗಳ ಆಯ್ಕೆ, ಯೋಜನೆಯ ಹಂಚಿಕೆ, ಪ್ರತಿ ಹಂತದಲ್ಲೂ ಸಮುದಾಯದ ಸಹಭಾಗಿತ್ವದಲ್ಲೇ ಗ್ರಾಮದ ಅಭಿವೃದ್ಧಿ ಕಾರ್ಯಕೈಗೊಂಡಿರುವುದನ್ನು ಅವರು ಉದಾಹರಣೆ ಸಹಿತ ಮಾಹಿತಿ ನೀಡುತ್ತಿದ್ದರು. ಅವರ ಮಾತುಗಳನ್ನು ಕೇಳುತ್ತಿದ್ದಾಗ, ಅಧಿಕಾರ ವಿಕೇಂದ್ರೀಕರಣದ ಫಲ ನಿಜಾರ್ಥದಲ್ಲಿ ಜನಸಾಮಾನ್ಯರ ಮಧ್ಯೆ ಹಂಚಿಕೆಯಾದ ಅನುಭವವಾಯಿತು.

ತಾನು ಸಂಗ್ರಹಿಸಿದ ತೆರಿಗೆ ಹಣದಲ್ಲಿ ಪಂಚಾಯ್ತಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮಾಲಂಗಿ ಗ್ರಾಮಪಂಚಾಯ್ತಿಯ ಶಕ್ತಿ ಅಡಗಿರುವುದು ಇಲ್ಲಿಯೇ. ಈ ಪಂಚಾಯ್ತಿ, ಮೊದಲು ಒತ್ತುವರಿಯಾಗಿದ್ದ 22 ಎಕರೆ ಸರಕಾರಿ ಜಾಗವನ್ನು ಜೇನುಕುರುಬ ಸಮುದಾಯದ ಹೋರಾಟಗಾರ್ತಿ ಜಾನಕಮ್ಮನ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ಇದೀಗ ಕಿತ್ತೂರು ರಾಣಿ ಮತ್ತು ಇಂದಿರಾಗಾಂಧಿ ವಸತಿಶಾಲೆಗಳಿವೆ. ಉಳಿದ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಲಾಗಿದೆ. ರೂ 1.25 ಲಕ್ಷದಷ್ಟಿದ್ದ ಪಂಚಾಯ್ತಿಯ ವಾರ್ಷಿಕ ಆದಾಯವನ್ನು ರೂ 15 ಲಕ್ಷಕ್ಕೆ ಏರಿಸಿದೆ. ಈ ಹಣವನ್ನು ಪಂಚಾಯ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ.

ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕೆಂದರೆ, ಹಣ ಬೇಕೇಬೇಕು. ಆದರೆ, ಈ ಪಂಚಾಯ್ತಿ ಹಣವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುದಕ್ಕೆ ಮಾದರಿಯನ್ನೇ ರೂಪಿಸಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಗಳ ಸರ್ವೆ ಮಾಡಿಸಿ, ಸರ್ಕಾರದಿಂದ ಏನೇನು ಸೌಲಭ್ಯಗಳಿವೆ ಎಂಬುದನ್ನು ಅರಿವು ಮೂಡಿಸುವ ಕೆಲಸವಾಯಿತು. ನಂತರದಲ್ಲಿ ಆ ಊರಿಗೆ ಏನೇನು ಕಾರ್ಯಗಳು ನಡೆಯಬೇಕೆಂಬ ಪಟ್ಟಿಯೂ ಸಿದ್ಧವಾಯಿತು.

ಈ ಮಧ್ಯೆ ಸ್ವಯಂಸೇವಾಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಶಿಬಿರ ನಡೆಸಿ, ಶೇ 100ರಷ್ಟು ಲಸಿಕೆ ಹಾಕಿಸುವ ಕಾರ್ಯವೂ ಪೂರ್ಣಗೊಂಡಿತು. ಕಾನೂನು ಅರಿವು ಶಿಬಿರಗಳು ನಡೆದವು. ದಾನಿಗಳನ್ನು ಹುಡುಕಿ, ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಬೇಕಾಗುವ ಮೂಲಸೌಲಭ್ಯಗಳನ್ನು ಕೊಡಿಸಲಾಯಿತು.

ಬೋರನಕಟ್ಟೆ ಹಾಡಿಯಲ್ಲಿ ಕಾಡಾನೆ ಹಾವಳಿ ತಡೆಗೆ ಸ್ವಯಂಸೇವಾಸಂಸ್ಥೆಯಿಂದ ಸೋಲಾರ್ ಬೀದಿದೀಪಗಳನ್ನು ಅಳವಡಿಸಲಾಗಿದೆ. ಈ ಭಾಗದ ತಂಬಾಕು ಬೆಳೆಗಳನ್ನು ಕೊಳ್ಳುವ ಐಟಿಸಿ ಕಂಪನಿಯಿಂದ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಕೆರೆಗಳ ಹೂಳೆತ್ತಿಸಲಾಗಿದೆ. ಮೆಂಡಾ ಫೌಂಡೇಷನ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಜತೆಗೆ, ಗ್ರಾಮ ಪಂಚಾಯ್ತಿಯಿಂದ ರೂ 30 ಸಾವಿರ ನೀಡಿ, 5 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕೊಡಿಸಲಾಗಿದೆ. ಇದೀಗ ಮಾಲಂಗಿ ಸಂಪೂರ್ಣ ಸೋಲಾರ್ ಗ್ರಾಮ.
‘ಶಿಕ್ಷಣಕ್ಕಾಗಿ ಬೆಳಕು’ ಯೋಜನೆಯಡಿ ಹಾಡಿಯ ಗುಡಿಸಲುಗಳಿಗೆ ಸೆಲ್ಕೊ ಸೋಲಾರ್ ಕಂಪನಿಯ ಸಹಯೋಗದೊಂದಿಗೆ ರೂ 1 ಲಕ್ಷ ವೆಚ್ಚದಲ್ಲಿ ಸೋಲಾರ್ ಲೈಟ್‍ಗಳನ್ನು ವಿತರಿಸಲಾಗಿದೆ. ಈ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪಂಚಾಯ್ತಿ ಶ್ರಮಿಸಿದೆ. ಒಂಬತ್ತು ಶಾಲೆಗಳಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳು, ಊಟದ ತಟ್ಟೆಗಳನ್ನು ವಿತರಿಸಲಾಗಿದೆ.

ಪಂಚಾಯ್ತಿಯಿಂದಲೇ ವಿಧವಾ, ವೃದ್ಧಾಪ್ಯ ವೇತನಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸಿಕೊಡಲಾಗಿದೆ.

ರೂ 19 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ, `ರಾಜೀವ ಗಾಂಧಿ ಸೇವಾಕೇಂದ್ರ’ ನಿರ್ಮಾಣ. ಜಿಲ್ಲಾ ಪಂಚಾಯ್ತಿಯ ಅನುದಾನದಿಂದ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಅನುವಾಗುವ ಆಟದ ಪರಿಕರಗಳು, ಪೀಠೋಪಕರಣಗಳ ಪೂರೈಕೆ. ಗ್ರಾಮೀಣ ಕ್ರೀಡೆಗಳ ಆಯೋಜನೆ.. ಇವೆಲ್ಲ ಅಭಿವೃದ್ಧಿ ಚಟುವಟಿಕೆಗಳ ಭಾಗವಾಗಿವೆ ಎನ್ನುತ್ತಾರೆ ಶೋಭಾರಾಣಿ.

ಇತ್ತೀಚೆಗೆ ಕಾನನ ಕೃಷಿಕ ಸಂಘದ ಮಹಿಳೆಯರು ‘ಕಾನನ ಸಮುದಾಯ ಬೀಜ ಬ್ಯಾಂಕ್’ ಆರಂಭಿಸಿದ್ದಾರೆ. ಮಾಲಂಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಈ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ಸೂಚಿಸಿವೆ. ಮಾತ್ರವಲ್ಲ, ರಾಜ್ಯ ಸರ್ಕಾರದಿಂದ ಎರಡು ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಅಲ್ಲದೆ ಬಯಲು ಶೌಚಮುಕ್ತ ಗ್ರಾಮಪಂಚಾಯ್ತಿ ಪುರಸ್ಕಾರವನ್ನೂ ಪಡೆದಿದೆ.
ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಕೊಡಮಾಡುವ `ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ -2018’ ರ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಪಂಚಾಯ್ತಿ ಮಾಲಂಗಿ. ಕಳೆದ ವರ್ಷ ಏಪ್ರಿಲ್ 24 ರಂದು ಮಧ್ಯಪ್ರದೇಶದ ಜಬಲ್‍ಪುರ್‍ನಲ್ಲಿ ಆಯೋಜಿಸಿದ `ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಶೋಭಾರಾಣಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇಡೀ ಮಾಲಂಗಿ ಗ್ರಾಮಪಂಚಾಯ್ತಿಯಲ್ಲಿ ಇಂಥದ್ದೊಂದು ಬದಲಾವಣೆ ತರಲು ಕಾರಣರಾಗಿದ್ದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಪರಿಶ್ರಮ ಎಂದು ಗ್ರಾಮಸ್ಥರು ಮತ್ತು ಪಂಚಾಯ್ತಿಯ ಪದಾಧಿಕಾರಿಗಳು ಅಭಿಪ್ರಾಯಪಡುತ್ತಾರೆ. ಶೋಭಾ ಅವರು ಎಂಎಸ್ಸಿ ಪದವೀಧರೆ, 2010 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಪಿಎಚ್‍ಡಿ ಪಡೆದಿದ್ದಾರೆ. ಜಾರ್ಖಂಡ್ ವಿಶ್ವವಿದ್ಯಾಲಯದ ರಾಧೇಶ್ಯಾಮ್ ಪ್ರತಿಷ್ಠಾನದಿಂದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಥ ಹಿನ್ನೆಲೆ ಮತ್ತು ತನ್ನ ಜ್ಞಾನ ಸಂಶೋಧನಾ ತಿಳಿವಳಿಕೆಯನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಅವರು ಪಂಚಾಯ್ತಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರ ಉನ್ನತ ಶಿಕ್ಷಣದ ಅರಿವು ಗ್ರಾಮಮಟ್ಟದಲ್ಲಿ ಸಮರ್ಥವಾಗಿ ಬಳಕೆಯಾಗಿದೆ. ಮಾಲಂಗಿಯನ್ನು ಮಾದರಿ ಗ್ರಾಮವನ್ನಾಗಿ ರೂಪಿಸಿದ ಶೋಭಾರಾಣಿ ಅವರು ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಹೊಸ ಗ್ರಾಮಪಂಚಾಯ್ತಿಯಲ್ಲೂ ಇಂಥದ್ದೇ ಹೊಸ ಮಾದರಿಗಳು ರೂಪುಗೊಳ್ಳಲಿ. ಅವರು ಈಗ ರೂಪಿಸಿರುವ ಮಾದರಿಯನ್ನು ಅರಿಯುವ ಪ್ರಯತ್ನವಾಗಲಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...