Homeಚಳವಳಿಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : 'ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್' ನೋಂದಾಯಿಸಿದ ಸರ್ಕಾರ

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದ ಕಾರ್ಮಿಕರ ಸುದೀರ್ಘ ಹೋರಾಟಕ್ಕೆ ಮಣಿದ ತಮಿಳುನಾಡು ಕಾರ್ಮಿಕ ಇಲಾಖೆಯು ಜನವರಿ 27, ಸೋಮವಾರದಂದು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ ಸಿಕ್ಕಂತಾಗಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಸೆಪ್ಟೆಂಬರ್ 9, 2024ರಿಂದ ಅಕ್ಟೋಬರ್ 15, 2024ರವರೆಗೆ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಸೆಂಟರ್ ಆಫ್‌ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಇವರಿಗೆ ಸಾಥ್ ನೀಡಿತ್ತು.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿತ್ತು.

ಒಕ್ಕೂಟದ ನೋಂದಣಿಯು ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿತ್ತು. ಅವರು ಕಂಪನಿಯೊಂದಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕಾದರೆ ಅಥವಾ ಅನ್ಯಾಯವನ್ನು ಪ್ರಶ್ನಿಸಬೇಕಾದರೆ ಸಾಮೂಹಿಕ ಧ್ವನಿಯ ಅಗತ್ಯವಿತ್ತು.

ಪ್ರತಿಭಟನೆ ಪ್ರಾರಂಭಗೊಂಡ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕಂಪನಿಯು ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಗಿತ್ತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದು ಹಾಕಲಾಗಿತ್ತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಕಂಪನಿಯ ಹೆಸರನ್ನು ಬಳಸುವುದರಿಂದ ಕಂಪನಿಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸ್ಯಾಮ್‌ಸಂಗ್ ಇಂಡಿಯಾ ವಾದಿಸಿತ್ತು. “ಸ್ಯಾಮ್‌ಸಂಗ್ ಒಂದು ಅಂತಾರಾಷ್ಟ್ರೀಯ ಕಂಪನಿ. ಕಾರ್ಮಿಕರು ಒಕ್ಕೂಟ ರಚಿಸುವ ಹಕ್ಕನ್ನು ಹೊಂದಿದ್ದರೂ, ಸ್ಯಾಮ್‌ಸಂಗ್ ಹೆಸರನ್ನು ಬಳಸುವ ಮೂಲಭೂತ ಹಕ್ಕನ್ನು ಅವರು ಹೊಂದಿಲ್ಲ. ಮುಷ್ಕರದಿಂದಾಗಿ ನಮಗೆ 100 ಮಿಲಿಯನ್ ಡಾಲರ್ ನಷ್ಟವಾಗಿದೆ” ಎಂದು ಕಂಪನಿಯ ವಕೀಲರು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದರು.

ಡಿಸೆಂಬರ್ 5, 2024ರಂದು, ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳಲ್ಲಿ ಒಕ್ಕೂಟದ ನೋಂದಣಿ ಬಗ್ಗೆ ನಿರ್ಧರಿಸುವಂತೆ ನಿರ್ದೇಶನ ನೀಡಿತ್ತು. ಜನವರಿ 27, 2025ರಂದು ಕಾರ್ಮಿಕ ಇಲಾಖೆಯು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಜಯ ದೊರೆತಿದೆ.

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...