Homeಚಳವಳಿಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : 'ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್' ನೋಂದಾಯಿಸಿದ ಸರ್ಕಾರ

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದ ಕಾರ್ಮಿಕರ ಸುದೀರ್ಘ ಹೋರಾಟಕ್ಕೆ ಮಣಿದ ತಮಿಳುನಾಡು ಕಾರ್ಮಿಕ ಇಲಾಖೆಯು ಜನವರಿ 27, ಸೋಮವಾರದಂದು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ ಸಿಕ್ಕಂತಾಗಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಸೆಪ್ಟೆಂಬರ್ 9, 2024ರಿಂದ ಅಕ್ಟೋಬರ್ 15, 2024ರವರೆಗೆ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಸೆಂಟರ್ ಆಫ್‌ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಇವರಿಗೆ ಸಾಥ್ ನೀಡಿತ್ತು.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿತ್ತು.

ಒಕ್ಕೂಟದ ನೋಂದಣಿಯು ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿತ್ತು. ಅವರು ಕಂಪನಿಯೊಂದಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕಾದರೆ ಅಥವಾ ಅನ್ಯಾಯವನ್ನು ಪ್ರಶ್ನಿಸಬೇಕಾದರೆ ಸಾಮೂಹಿಕ ಧ್ವನಿಯ ಅಗತ್ಯವಿತ್ತು.

ಪ್ರತಿಭಟನೆ ಪ್ರಾರಂಭಗೊಂಡ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕಂಪನಿಯು ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಗಿತ್ತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದು ಹಾಕಲಾಗಿತ್ತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಕಂಪನಿಯ ಹೆಸರನ್ನು ಬಳಸುವುದರಿಂದ ಕಂಪನಿಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸ್ಯಾಮ್‌ಸಂಗ್ ಇಂಡಿಯಾ ವಾದಿಸಿತ್ತು. “ಸ್ಯಾಮ್‌ಸಂಗ್ ಒಂದು ಅಂತಾರಾಷ್ಟ್ರೀಯ ಕಂಪನಿ. ಕಾರ್ಮಿಕರು ಒಕ್ಕೂಟ ರಚಿಸುವ ಹಕ್ಕನ್ನು ಹೊಂದಿದ್ದರೂ, ಸ್ಯಾಮ್‌ಸಂಗ್ ಹೆಸರನ್ನು ಬಳಸುವ ಮೂಲಭೂತ ಹಕ್ಕನ್ನು ಅವರು ಹೊಂದಿಲ್ಲ. ಮುಷ್ಕರದಿಂದಾಗಿ ನಮಗೆ 100 ಮಿಲಿಯನ್ ಡಾಲರ್ ನಷ್ಟವಾಗಿದೆ” ಎಂದು ಕಂಪನಿಯ ವಕೀಲರು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದರು.

ಡಿಸೆಂಬರ್ 5, 2024ರಂದು, ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳಲ್ಲಿ ಒಕ್ಕೂಟದ ನೋಂದಣಿ ಬಗ್ಗೆ ನಿರ್ಧರಿಸುವಂತೆ ನಿರ್ದೇಶನ ನೀಡಿತ್ತು. ಜನವರಿ 27, 2025ರಂದು ಕಾರ್ಮಿಕ ಇಲಾಖೆಯು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಜಯ ದೊರೆತಿದೆ.

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...