Homeಮುಖಪುಟದೊರೆಸ್ವಾಮಿಯವರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದ ಸಂಯುಕ್ತ ಕಿಸಾನ್ ಮೋರ್ಚಾ

ದೊರೆಸ್ವಾಮಿಯವರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದ ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್‌.ಆರ್.ದೊರೆಸ್ವಾಮಿ ಅವರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದೆ. ಮೇ 26 ರಂದು ನಡೆದ ಕರಾಳ ದಿನ ಆಚರಣೆಯಲ್ಲಿ ಸ್ಮರಿಸಲಾಗಿದೆ.

ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರ ಮತ್ತು ಪ್ರಸ್ತುತ ರೈತ ಚಳವಳಿಯ ದೃಢ ಬೆಂಬಲಿಗರಾದ ಶ್ರೀ ಎಚ್.ಎಸ್ ದೊರೆಸ್ವಾಮಿ ಅವರು ತಮ್ಮ 104 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಜೀವಿತಾವಧಿಯಲ್ಲಿ, ದೊರೆಸ್ವಾಮಿ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು ಮಾತ್ರವಲ್ಲ, ಸ್ವತಂತ್ರ ಭಾರತದಲ್ಲಿಯೂ ಸಹ ನ್ಯಾಯ, ಸಮಾನತೆ ಮತ್ತು ಅಂಚಿನಲ್ಲಿರುವವರ ಹಕ್ಕುಗಳಿಗಾಗಿ ಕೊನೆಯುಸಿರು ಇರುವವರೆಗೂ ಹೋರಾಡಿದರು ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ದೊರೆಸ್ವಾಮಿ ಅವರು ದೇಶದಲ್ಲಿ ಅತ್ಯಂತ ಪ್ರಗತಿಪರ ಧ್ವನಿಯನ್ನು ಪ್ರತಿನಿಧಿಸಿದವರು. ವಿವಾದಿತ ಕೃಷಿ ಕಾನೂನಗಳ ವಿರುದ್ಧದ ರೈತ ಹೋರಾಟದಲ್ಲಿ ಸಕ್ರಿಯವಾಗಿ ಬೆಂಬಲಿಸಿದ್ದ ಅವರ ನಿಧನಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಸದಸ್ಯರು ಸಂತಾಪ ಸೂಚಿಸಿ ಗೌರವಯುತ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದರು. ಅವರಿಗೆ 104 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತಾನೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದರ ನಂತರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ರೈತರ ಚಳವಳಿ ದೆಹಲಿಯ ಗಡಿಗಳಲ್ಲಿ ಆರಂಭವಾಗಿ ಮೇ 26ಕ್ಕೆ 6 ತಿಂಗಳು ತುಂಬಿವೆ. ಈ  ಐತಿಹಾಸಿಕ, ಶಾಂತಿಯುತ ಪ್ರತಿಭಟನೆಗೆ ದೇಶ- ವಿದೇಶಗಳ ಜನರು ಬೆಂಬಲ ನೀಡಿದ್ದಾರೆ. ರೈತರು ಮೇ 26 ಅನ್ನು ರೈತರಿಗೆ ಕರಾಳ ದಿನವೆಂದು ಆಚರಿಸಲು ಕರೆ ನೀಡಿದ್ದರು. ರೈತರ ಕರೆಗೆ  ಲಕ್ಷಾಂತರ ಭಾರತೀಯರು ಸರ್ಕಾರದ ವಿರುದ್ಧ ದೇಶಾದ್ಯಂತ ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...