Homeಮುಖಪುಟಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ 'ಸಂಯುಕ್ತ ಹೋರಾಟ ಸಮಿತಿ' ತೀವ್ರ ಖಂಡನೆ

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

- Advertisement -
- Advertisement -

“ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ” ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ (ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನೆನ್ನೆ (ಜುಲೈ 13) ಬಿಡದಿಯ ಮಂದಲಹಳ್ಳಿಯಲ್ಲಿ ಪೊಲೀಸ್ ಕಾವಲಿನಲ್ಲಿ ಜೆಎಂಸಿ ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ರೈತರು ಪ್ರತಿರೋಧಿಸಿದ ಘಟನೆಯ ಬೆನ್ನಲ್ಲೇ, ಸಮಿತಿಯು ಜುಲೈ 14 ರಂದು ಮಹತ್ವದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಮಾತು ತಪ್ಪಿದ ಸರ್ಕಾರ: ರೈತರ ಆಕ್ರೋಶಕ್ಕೆ ಕಾರಣವೇನು?

“ಬಿಡದಿ ಸುತ್ತಮುತ್ತಲಿನ ಹಳ್ಳಿಗಳ ರೈತರು ಕಳೆದ ಒಂದೂವರೆ ವರ್ಷದಿಂದ (18 ತಿಂಗಳು) ‘ನಮ್ಮ ಜಮೀನು ನಮಗೆ ಬೇಕು, ಈ ಯೋಜನೆಗೆ ನಮ್ಮ ಸಮ್ಮತಿ ಇಲ್ಲ’ ಎಂದು ನಿರಂತರವಾಗಿ ಧರಣಿ ನಡೆಸುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ” ಎಂದು ಸಮಿತಿ ನೆನಪಿಸಿದೆ.

ಇತ್ತೀಚೆಗಷ್ಟೇ ಸ್ಥಳೀಯ ಶಾಸಕರು ಸಭೆ ಕರೆದು ಭೂಮಿಗೆ ಎಷ್ಟು ಬೆಲೆ ಬೇಕು ಎಂದು ಕೇಳಿದಾಗಲೂ, ರೈತರು ಅತ್ಯಂತ ಸ್ಪಷ್ಟವಾಗಿ ನಮಗೆ ಬೆಲೆ ಮುಖ್ಯವಲ್ಲ, ನಾವು ಭೂಮಿ ಮಾರಲು ಸಿದ್ಧರಿಲ್ಲ. ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬ ಏಕೈಕ ಬೇಡಿಕೆಯನ್ನು ಇಟ್ಟಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳೇ ಮಧ್ಯಪ್ರವೇಶಿಸಿ, “ಹಾಗಾದರೆ ಈ ವಿಚಾರವನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಬೇಕು. ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ರೈತರ ಸಭೆ ನಿಗದಿಪಡಿಸುತ್ತೇವೆ” ಎಂದು ಭರವಸೆ ನೀಡಿ ಮಾತು ಕೊಟ್ಟಿದ್ದರು.

ಆದರೆ, ಕೊಟ್ಟ ಮಾತನ್ನು ಗಾಳಿಗೆ ತೂರಿ, ಇದ್ದಕ್ಕಿದ್ದಂತೆ ನೂರಾರು ಪೊಲೀಸರನ್ನು ಕರೆತಂದು ಬಲವಂತವಾಗಿ ಜಂಟಿ ಸರ್ವೆಗೆ ಮುಂದಾಗಿರುವುದು ಅತ್ಯಂತ ಅಪ್ರಜಾಪ್ರಭುತ್ವವಾದಿ ನಡೆ ಎಂದು ಸಮಿತಿ ಆಕ್ಷೇಪಿಸಿದೆ.

ಬಲವಂತದ ಭೂಸ್ವಾಧೀನಕ್ಕೆ ಮುಂದಾದರೆ ರಾಜ್ಯಾದ್ಯಂತ ಹೋರಾಟ

ಸರ್ಕಾರದ ಈ ದಬ್ಬಾಳಿಕೆಯನ್ನು ಕಟುವಾಗಿ ಟೀಕಿಸಿರುವ ಸಂಯುಕ್ತ ಹೋರಾಟದ ನಾಯಕರು, “ಸರ್ಕಾರ ಒಂದು ವೇಳೆ ಪೊಲೀಸ್ ಬಲ ಬಳಸಿ ಬಲವಂತವಾಗಿ ಭೂಸ್ವಾಧೀನ ಮಾಡಲು ಮುಂದಾದರೆ, ಇದು ಕೇವಲ ಬಿಡದಿ ರೈತರ ಹೋರಾಟವಾಗಿ ಉಳಿಯುವುದಿಲ್ಲ. ಇಡೀ ರಾಜ್ಯದ ರೈತರು ಒಗ್ಗೂಡಿ ಸರ್ಕಾರದ ವಿರುದ್ಧ ಬೀದಿಗಿಳಿಯಲಿದ್ದಾರೆ. ಇದರ ಗಂಭೀರ ರಾಜಕೀಯ ಮತ್ತು ಸಾಮಾಜಿಕ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ” ಎಂದು ಕಟು ಎಚ್ಚರಿಕೆ ನೀಡಿದ್ದಾರೆ.

“ಅತ್ಯಂತ ಫಲವತ್ತಾದ, ನೀರಾವರಿ ಸಮೃದ್ಧ ಹಾಗೂ ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವ ರೈತರ ಜೀವನಾಡಿಯಾದ ಭೂಮಿಯನ್ನು ಕಿತ್ತುಕೊಂಡು, ಅಲ್ಲಿ ಕಾಂಕ್ರೀಟ್ ಟೌನ್‌ಶಿಪ್ ಮಾಡಲು ಹೊರಟಿರುವ ಈ ವಿನಾಶಕಾರಿ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಹಿಂದೆ ರೈತರಿಗೆ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ತಕ್ಷಣವೇ ಸಭೆ ಕರೆದು ಈ ಸಮಸ್ಯೆಗೆ ಶಾಶ್ವತ ಕೊನೆ ಹಾಡಬೇಕು” ಎಂದು ಸಮಿತಿ ಒತ್ತಾಯಿಸಿದೆ.

ನಿನ್ನೆ ನಡೆದ ಸಂಘರ್ಷದ ವೇಳೆ ಅಧಿಕಾರಿಗಳು ಮತ್ತು ಪೊಲೀಸರು ರೈತರ ಮನೆಗಳಿಗೆ ನುಗ್ಗಿ ಜಮೀನನ್ನು ವಶಪಡಿಸಿಕೊಳ್ಳಬಹುದು ಎಂಬ ಆತಂಕ ಸೃಷ್ಟಿಯಾಗಿದ್ದರಿಂದ ರೈತ ಮಹಿಳೆಯರು ಹಾಗೂ ಹಿರಿಯರು ತೀವ್ರವಾಗಿ ಪ್ರತಿಭಟಿಸಿದ್ದಾರೆ. ಈ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿರುವುದನ್ನು ಪ್ರಸ್ತಾಪಿಸಿರುವ ಸಮಿತಿಯು ರೈತರಲ್ಲಿ ವಿಶೇಷ ಮನವಿ ಮಾಡಿದೆ.

“ಯಾವದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂಬ ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಸರ್ಕಾರದ ದಬ್ಬಾಳಿಕೆಗೆ ನಾವು ತೀವ್ರ ಪ್ರತಿರೋಧ ಒಡ್ಡೋಣ, ಆದರೆ ಯಾವುದೇ ಕಾರಣಕ್ಕೂ ಶಾಂತಿ ಮತ್ತು ಸಂಯಮವನ್ನು ಕಳೆದುಕೊಳ್ಳಬಾರದು. ಕೇವಲ ಶಾಂತಿಯುತ ಹಾಗೂ ಸಂಘಟಿತ ಹೋರಾಟದ ಮೂಲಕವೇ ನಮ್ಮ ಭೂಮಿಯನ್ನು ನಾವು ಉಳಿಸಿಕೊಳ್ಳೋಣ” ಎಂದು ರೈತ ಬಂಧುಗಳಲ್ಲಿ ಸಂಯುಕ್ತ ಹೋರಾಟ ಸಮಿತಿ ವಿನಂತಿಸಿದೆ.

ಈ ಮಾಧ್ಯಮ ಹೇಳಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಪ್ರೊ. ಆರ್. ಬಸವರಾಜಪ್ಪ, ಕರ್ನಾಟಕ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಯು. ಬಸವರಾಜ್ ಡಾ. ಯಶವಂತ ಸೇರಿದಂತೆ ಇಡೀ ಕರ್ನಾಟಕದ ಪ್ರಮುಖ ರೈತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಒಮ್ಮತದ ಬೆಂಬಲ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...