Homeಮುಖಪುಟಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ 'ಸಂಯುಕ್ತ ಹೋರಾಟ ಸಮಿತಿ' ತೀವ್ರ ಖಂಡನೆ

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

- Advertisement -
- Advertisement -

“ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ” ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ (ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನೆನ್ನೆ (ಜುಲೈ 13) ಬಿಡದಿಯ ಮಂದಲಹಳ್ಳಿಯಲ್ಲಿ ಪೊಲೀಸ್ ಕಾವಲಿನಲ್ಲಿ ಜೆಎಂಸಿ ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ರೈತರು ಪ್ರತಿರೋಧಿಸಿದ ಘಟನೆಯ ಬೆನ್ನಲ್ಲೇ, ಸಮಿತಿಯು ಜುಲೈ 14 ರಂದು ಮಹತ್ವದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಮಾತು ತಪ್ಪಿದ ಸರ್ಕಾರ: ರೈತರ ಆಕ್ರೋಶಕ್ಕೆ ಕಾರಣವೇನು?

“ಬಿಡದಿ ಸುತ್ತಮುತ್ತಲಿನ ಹಳ್ಳಿಗಳ ರೈತರು ಕಳೆದ ಒಂದೂವರೆ ವರ್ಷದಿಂದ (18 ತಿಂಗಳು) ‘ನಮ್ಮ ಜಮೀನು ನಮಗೆ ಬೇಕು, ಈ ಯೋಜನೆಗೆ ನಮ್ಮ ಸಮ್ಮತಿ ಇಲ್ಲ’ ಎಂದು ನಿರಂತರವಾಗಿ ಧರಣಿ ನಡೆಸುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ” ಎಂದು ಸಮಿತಿ ನೆನಪಿಸಿದೆ.

ಇತ್ತೀಚೆಗಷ್ಟೇ ಸ್ಥಳೀಯ ಶಾಸಕರು ಸಭೆ ಕರೆದು ಭೂಮಿಗೆ ಎಷ್ಟು ಬೆಲೆ ಬೇಕು ಎಂದು ಕೇಳಿದಾಗಲೂ, ರೈತರು ಅತ್ಯಂತ ಸ್ಪಷ್ಟವಾಗಿ ನಮಗೆ ಬೆಲೆ ಮುಖ್ಯವಲ್ಲ, ನಾವು ಭೂಮಿ ಮಾರಲು ಸಿದ್ಧರಿಲ್ಲ. ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬ ಏಕೈಕ ಬೇಡಿಕೆಯನ್ನು ಇಟ್ಟಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳೇ ಮಧ್ಯಪ್ರವೇಶಿಸಿ, “ಹಾಗಾದರೆ ಈ ವಿಚಾರವನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಬೇಕು. ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ರೈತರ ಸಭೆ ನಿಗದಿಪಡಿಸುತ್ತೇವೆ” ಎಂದು ಭರವಸೆ ನೀಡಿ ಮಾತು ಕೊಟ್ಟಿದ್ದರು.

ಆದರೆ, ಕೊಟ್ಟ ಮಾತನ್ನು ಗಾಳಿಗೆ ತೂರಿ, ಇದ್ದಕ್ಕಿದ್ದಂತೆ ನೂರಾರು ಪೊಲೀಸರನ್ನು ಕರೆತಂದು ಬಲವಂತವಾಗಿ ಜಂಟಿ ಸರ್ವೆಗೆ ಮುಂದಾಗಿರುವುದು ಅತ್ಯಂತ ಅಪ್ರಜಾಪ್ರಭುತ್ವವಾದಿ ನಡೆ ಎಂದು ಸಮಿತಿ ಆಕ್ಷೇಪಿಸಿದೆ.

ಬಲವಂತದ ಭೂಸ್ವಾಧೀನಕ್ಕೆ ಮುಂದಾದರೆ ರಾಜ್ಯಾದ್ಯಂತ ಹೋರಾಟ

ಸರ್ಕಾರದ ಈ ದಬ್ಬಾಳಿಕೆಯನ್ನು ಕಟುವಾಗಿ ಟೀಕಿಸಿರುವ ಸಂಯುಕ್ತ ಹೋರಾಟದ ನಾಯಕರು, “ಸರ್ಕಾರ ಒಂದು ವೇಳೆ ಪೊಲೀಸ್ ಬಲ ಬಳಸಿ ಬಲವಂತವಾಗಿ ಭೂಸ್ವಾಧೀನ ಮಾಡಲು ಮುಂದಾದರೆ, ಇದು ಕೇವಲ ಬಿಡದಿ ರೈತರ ಹೋರಾಟವಾಗಿ ಉಳಿಯುವುದಿಲ್ಲ. ಇಡೀ ರಾಜ್ಯದ ರೈತರು ಒಗ್ಗೂಡಿ ಸರ್ಕಾರದ ವಿರುದ್ಧ ಬೀದಿಗಿಳಿಯಲಿದ್ದಾರೆ. ಇದರ ಗಂಭೀರ ರಾಜಕೀಯ ಮತ್ತು ಸಾಮಾಜಿಕ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ” ಎಂದು ಕಟು ಎಚ್ಚರಿಕೆ ನೀಡಿದ್ದಾರೆ.

“ಅತ್ಯಂತ ಫಲವತ್ತಾದ, ನೀರಾವರಿ ಸಮೃದ್ಧ ಹಾಗೂ ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವ ರೈತರ ಜೀವನಾಡಿಯಾದ ಭೂಮಿಯನ್ನು ಕಿತ್ತುಕೊಂಡು, ಅಲ್ಲಿ ಕಾಂಕ್ರೀಟ್ ಟೌನ್‌ಶಿಪ್ ಮಾಡಲು ಹೊರಟಿರುವ ಈ ವಿನಾಶಕಾರಿ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಹಿಂದೆ ರೈತರಿಗೆ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ತಕ್ಷಣವೇ ಸಭೆ ಕರೆದು ಈ ಸಮಸ್ಯೆಗೆ ಶಾಶ್ವತ ಕೊನೆ ಹಾಡಬೇಕು” ಎಂದು ಸಮಿತಿ ಒತ್ತಾಯಿಸಿದೆ.

ನಿನ್ನೆ ನಡೆದ ಸಂಘರ್ಷದ ವೇಳೆ ಅಧಿಕಾರಿಗಳು ಮತ್ತು ಪೊಲೀಸರು ರೈತರ ಮನೆಗಳಿಗೆ ನುಗ್ಗಿ ಜಮೀನನ್ನು ವಶಪಡಿಸಿಕೊಳ್ಳಬಹುದು ಎಂಬ ಆತಂಕ ಸೃಷ್ಟಿಯಾಗಿದ್ದರಿಂದ ರೈತ ಮಹಿಳೆಯರು ಹಾಗೂ ಹಿರಿಯರು ತೀವ್ರವಾಗಿ ಪ್ರತಿಭಟಿಸಿದ್ದಾರೆ. ಈ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿರುವುದನ್ನು ಪ್ರಸ್ತಾಪಿಸಿರುವ ಸಮಿತಿಯು ರೈತರಲ್ಲಿ ವಿಶೇಷ ಮನವಿ ಮಾಡಿದೆ.

“ಯಾವದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂಬ ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಸರ್ಕಾರದ ದಬ್ಬಾಳಿಕೆಗೆ ನಾವು ತೀವ್ರ ಪ್ರತಿರೋಧ ಒಡ್ಡೋಣ, ಆದರೆ ಯಾವುದೇ ಕಾರಣಕ್ಕೂ ಶಾಂತಿ ಮತ್ತು ಸಂಯಮವನ್ನು ಕಳೆದುಕೊಳ್ಳಬಾರದು. ಕೇವಲ ಶಾಂತಿಯುತ ಹಾಗೂ ಸಂಘಟಿತ ಹೋರಾಟದ ಮೂಲಕವೇ ನಮ್ಮ ಭೂಮಿಯನ್ನು ನಾವು ಉಳಿಸಿಕೊಳ್ಳೋಣ” ಎಂದು ರೈತ ಬಂಧುಗಳಲ್ಲಿ ಸಂಯುಕ್ತ ಹೋರಾಟ ಸಮಿತಿ ವಿನಂತಿಸಿದೆ.

ಈ ಮಾಧ್ಯಮ ಹೇಳಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಪ್ರೊ. ಆರ್. ಬಸವರಾಜಪ್ಪ, ಕರ್ನಾಟಕ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಯು. ಬಸವರಾಜ್ ಡಾ. ಯಶವಂತ ಸೇರಿದಂತೆ ಇಡೀ ಕರ್ನಾಟಕದ ಪ್ರಮುಖ ರೈತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಒಮ್ಮತದ ಬೆಂಬಲ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...