Homeಮುಖಪುಟಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ 'ಸಂಯುಕ್ತ ಹೋರಾಟ ಸಮಿತಿ' ತೀವ್ರ ಖಂಡನೆ

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

- Advertisement -
- Advertisement -

“ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ” ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ (ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನೆನ್ನೆ (ಜುಲೈ 13) ಬಿಡದಿಯ ಮಂದಲಹಳ್ಳಿಯಲ್ಲಿ ಪೊಲೀಸ್ ಕಾವಲಿನಲ್ಲಿ ಜೆಎಂಸಿ ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ರೈತರು ಪ್ರತಿರೋಧಿಸಿದ ಘಟನೆಯ ಬೆನ್ನಲ್ಲೇ, ಸಮಿತಿಯು ಜುಲೈ 14 ರಂದು ಮಹತ್ವದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಮಾತು ತಪ್ಪಿದ ಸರ್ಕಾರ: ರೈತರ ಆಕ್ರೋಶಕ್ಕೆ ಕಾರಣವೇನು?

“ಬಿಡದಿ ಸುತ್ತಮುತ್ತಲಿನ ಹಳ್ಳಿಗಳ ರೈತರು ಕಳೆದ ಒಂದೂವರೆ ವರ್ಷದಿಂದ (18 ತಿಂಗಳು) ‘ನಮ್ಮ ಜಮೀನು ನಮಗೆ ಬೇಕು, ಈ ಯೋಜನೆಗೆ ನಮ್ಮ ಸಮ್ಮತಿ ಇಲ್ಲ’ ಎಂದು ನಿರಂತರವಾಗಿ ಧರಣಿ ನಡೆಸುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ” ಎಂದು ಸಮಿತಿ ನೆನಪಿಸಿದೆ.

ಇತ್ತೀಚೆಗಷ್ಟೇ ಸ್ಥಳೀಯ ಶಾಸಕರು ಸಭೆ ಕರೆದು ಭೂಮಿಗೆ ಎಷ್ಟು ಬೆಲೆ ಬೇಕು ಎಂದು ಕೇಳಿದಾಗಲೂ, ರೈತರು ಅತ್ಯಂತ ಸ್ಪಷ್ಟವಾಗಿ ನಮಗೆ ಬೆಲೆ ಮುಖ್ಯವಲ್ಲ, ನಾವು ಭೂಮಿ ಮಾರಲು ಸಿದ್ಧರಿಲ್ಲ. ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬ ಏಕೈಕ ಬೇಡಿಕೆಯನ್ನು ಇಟ್ಟಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳೇ ಮಧ್ಯಪ್ರವೇಶಿಸಿ, “ಹಾಗಾದರೆ ಈ ವಿಚಾರವನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಬೇಕು. ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ರೈತರ ಸಭೆ ನಿಗದಿಪಡಿಸುತ್ತೇವೆ” ಎಂದು ಭರವಸೆ ನೀಡಿ ಮಾತು ಕೊಟ್ಟಿದ್ದರು.

ಆದರೆ, ಕೊಟ್ಟ ಮಾತನ್ನು ಗಾಳಿಗೆ ತೂರಿ, ಇದ್ದಕ್ಕಿದ್ದಂತೆ ನೂರಾರು ಪೊಲೀಸರನ್ನು ಕರೆತಂದು ಬಲವಂತವಾಗಿ ಜಂಟಿ ಸರ್ವೆಗೆ ಮುಂದಾಗಿರುವುದು ಅತ್ಯಂತ ಅಪ್ರಜಾಪ್ರಭುತ್ವವಾದಿ ನಡೆ ಎಂದು ಸಮಿತಿ ಆಕ್ಷೇಪಿಸಿದೆ.

ಬಲವಂತದ ಭೂಸ್ವಾಧೀನಕ್ಕೆ ಮುಂದಾದರೆ ರಾಜ್ಯಾದ್ಯಂತ ಹೋರಾಟ

ಸರ್ಕಾರದ ಈ ದಬ್ಬಾಳಿಕೆಯನ್ನು ಕಟುವಾಗಿ ಟೀಕಿಸಿರುವ ಸಂಯುಕ್ತ ಹೋರಾಟದ ನಾಯಕರು, “ಸರ್ಕಾರ ಒಂದು ವೇಳೆ ಪೊಲೀಸ್ ಬಲ ಬಳಸಿ ಬಲವಂತವಾಗಿ ಭೂಸ್ವಾಧೀನ ಮಾಡಲು ಮುಂದಾದರೆ, ಇದು ಕೇವಲ ಬಿಡದಿ ರೈತರ ಹೋರಾಟವಾಗಿ ಉಳಿಯುವುದಿಲ್ಲ. ಇಡೀ ರಾಜ್ಯದ ರೈತರು ಒಗ್ಗೂಡಿ ಸರ್ಕಾರದ ವಿರುದ್ಧ ಬೀದಿಗಿಳಿಯಲಿದ್ದಾರೆ. ಇದರ ಗಂಭೀರ ರಾಜಕೀಯ ಮತ್ತು ಸಾಮಾಜಿಕ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ” ಎಂದು ಕಟು ಎಚ್ಚರಿಕೆ ನೀಡಿದ್ದಾರೆ.

“ಅತ್ಯಂತ ಫಲವತ್ತಾದ, ನೀರಾವರಿ ಸಮೃದ್ಧ ಹಾಗೂ ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವ ರೈತರ ಜೀವನಾಡಿಯಾದ ಭೂಮಿಯನ್ನು ಕಿತ್ತುಕೊಂಡು, ಅಲ್ಲಿ ಕಾಂಕ್ರೀಟ್ ಟೌನ್‌ಶಿಪ್ ಮಾಡಲು ಹೊರಟಿರುವ ಈ ವಿನಾಶಕಾರಿ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಹಿಂದೆ ರೈತರಿಗೆ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ತಕ್ಷಣವೇ ಸಭೆ ಕರೆದು ಈ ಸಮಸ್ಯೆಗೆ ಶಾಶ್ವತ ಕೊನೆ ಹಾಡಬೇಕು” ಎಂದು ಸಮಿತಿ ಒತ್ತಾಯಿಸಿದೆ.

ನಿನ್ನೆ ನಡೆದ ಸಂಘರ್ಷದ ವೇಳೆ ಅಧಿಕಾರಿಗಳು ಮತ್ತು ಪೊಲೀಸರು ರೈತರ ಮನೆಗಳಿಗೆ ನುಗ್ಗಿ ಜಮೀನನ್ನು ವಶಪಡಿಸಿಕೊಳ್ಳಬಹುದು ಎಂಬ ಆತಂಕ ಸೃಷ್ಟಿಯಾಗಿದ್ದರಿಂದ ರೈತ ಮಹಿಳೆಯರು ಹಾಗೂ ಹಿರಿಯರು ತೀವ್ರವಾಗಿ ಪ್ರತಿಭಟಿಸಿದ್ದಾರೆ. ಈ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿರುವುದನ್ನು ಪ್ರಸ್ತಾಪಿಸಿರುವ ಸಮಿತಿಯು ರೈತರಲ್ಲಿ ವಿಶೇಷ ಮನವಿ ಮಾಡಿದೆ.

“ಯಾವದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂಬ ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಸರ್ಕಾರದ ದಬ್ಬಾಳಿಕೆಗೆ ನಾವು ತೀವ್ರ ಪ್ರತಿರೋಧ ಒಡ್ಡೋಣ, ಆದರೆ ಯಾವುದೇ ಕಾರಣಕ್ಕೂ ಶಾಂತಿ ಮತ್ತು ಸಂಯಮವನ್ನು ಕಳೆದುಕೊಳ್ಳಬಾರದು. ಕೇವಲ ಶಾಂತಿಯುತ ಹಾಗೂ ಸಂಘಟಿತ ಹೋರಾಟದ ಮೂಲಕವೇ ನಮ್ಮ ಭೂಮಿಯನ್ನು ನಾವು ಉಳಿಸಿಕೊಳ್ಳೋಣ” ಎಂದು ರೈತ ಬಂಧುಗಳಲ್ಲಿ ಸಂಯುಕ್ತ ಹೋರಾಟ ಸಮಿತಿ ವಿನಂತಿಸಿದೆ.

ಈ ಮಾಧ್ಯಮ ಹೇಳಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಪ್ರೊ. ಆರ್. ಬಸವರಾಜಪ್ಪ, ಕರ್ನಾಟಕ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಯು. ಬಸವರಾಜ್ ಡಾ. ಯಶವಂತ ಸೇರಿದಂತೆ ಇಡೀ ಕರ್ನಾಟಕದ ಪ್ರಮುಖ ರೈತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಒಮ್ಮತದ ಬೆಂಬಲ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...