Homeಕರ್ನಾಟಕಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

- Advertisement -
- Advertisement -

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಮತ್ತು ಯೋಜನೆಗಾಗಿ ಸುಮಾರು 9,640 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ.

ಸೋಮವಾರ (ಮೇ.18) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಸಿದ್ದನಗೌಡ ಪಾಟೀಲ, ನೂರ್ ಶ್ರೀಧರ್, ಟಿ.ಯಶವಂತ, ಪಿ.ಪಿ ಅಪ್ಪಣ್ಣ, ಪ್ರಕಾಶ್ ಸೇರಿದಂತೆ ರೈತರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 25 ಗ್ರಾಮಗಳ ಸುಮಾರು 9,640 ಎಕರೆ ಕೃಷಿ ಭೂಮಿ ನೀರಾವರಿ ಹೊಂದಿರುವ ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಸಮೃದ್ಧ ಹಸಿರು ಪ್ರದೇಶವಾಗಿದೆ ಎಂದರು.

ಈ ಪ್ರದೇಶವು ಜಿಬಿಎ ಗಡಿಗೆ ಹೊಂದಿಕೊಂಡಂತೆ ಇದ್ದು, ಬೆಂಗಳೂರು ಮಹಾನಗರಕ್ಕೆ ಹಾಲು, ಹಣ್ಣು, ತರಕಾರಿ ಮುಂತಾದ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಅಮೂಲ್ಯ ಆಹಾರದ ಕಣಜವಾಗಿದೆ. ಇಲ್ಲಿನ ಎಲ್ಲ ಕೃಷಿ ಕುಟುಂಬಗಳು ತಮ್ಮ ಸಣ್ಣ ಹಿಡುವಳಿಯಲ್ಲೇ ಮಿಶ್ರ ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ಅಡಿಕೆ ತಟ್ಟೆ ತಯಾರಿಕೆ ಮುಂತಾದ ಕೃಷಿ ಆಧಾರಿತ ಸಣ್ಣ ಉದ್ದಿಮೆಗಳನ್ನು ಕಟ್ಟಿಕೊಂಡು ಉತ್ತಮ ಮಾರುಕಟ್ಟೆಯನ್ನು ಕಂಡುಕೊಂಡಿದ್ದಾರೆ. ಇಂತಹ ಸುಸ್ಥಿರ ಬದುಕಿನ ಮೇಲೆ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೋರಾಟಗಾರರು ತಿಳಿಸಿದರು.

ಜಿಬಿಎ ಅನುಷ್ಠಾನಗೊಳಿಸುತ್ತಿರುವ ಬಿಡದಿ ಸಮಗ್ರ ಉಪ ನಗರ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿಯಲ್ಲಿ 2025ರ ಮಾ.13 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ತಕ್ಷಣವೇ, ಸುಮಾರು 3,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಈ ಭೂ ಸ್ವಾಧೀನಕ್ಕೆ ಒಪ್ಪಿಗೆ ಇಲ್ಲ ಎಂದು ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಇದುವರೆಗೂ ಈ ಯಾವ ರೈತರ ಆಕ್ಷೇಪಣೆಗಳನ್ನು ಸರ್ಕಾರ ಆಲಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಂದೂವರೆ ವರ್ಷದಿಂದ ವಿವಿಧ ಮಾದರಿಯಲ್ಲಿ ತಮ್ಮ ಬಲವಾದ ವಿರೋಧವನ್ನು ಇಲ್ಲಿನ ರೈತರು ದಾಖಲಿಸಿದ್ದು, 428ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಾ ಬಂದಿದ್ದರೂ, ಭಾದಿತ ರೈತರ ಜೊತೆ ಯಾವುದೇ ಸಮಾಲೋಚನೆ ನಡೆಸದೇ ಸಂಪುಟ ಅನುಮೋದನೆ ನೀಡಿರುವುದು ರೈತರ ಪ್ರಜಾಪ್ರಭುತ್ವ ಹಕ್ಕುಗಳ ನಗ್ನ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮ. ಕೂಡಲೇ ಸಿದ್ದರಾಮಯ್ಯ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಸರ್ಕಾರದ ರೈತ ವಿರೋಧಿ ನಡೆಯಿಂದಾಗಿ ಬಿಡದಿ ಮತ್ತೊಂದು ದೇವನಹಳ್ಳಿ ಹೋರಾಟ ಆಗಲಿಕ್ಕೆ ಹೊರಟಿದೆ. ಎರಡು ದಿನಗಳಾದರೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಸರ್ಕಾರ ರಾಜಧಾನಿಯನ್ನು ಬಂಡವಾಳಿಗರ ಬೆಂಗಳೂರು ಮಾಡಲಿಕ್ಕೆ ಹೊರಟಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕಾಗುತ್ತದೆ. ಬಂಡವಾಳಿಗರ ಪರ ಆಡಳಿತ ನಡೆಸಿದ್ದೇ ಆದಲ್ಲಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಖಂಡಿತವಾಗಿಯೂ ಅಧಿಕಾರ ಕಳೆದುಕೊಳ್ಳುತ್ತದೆ. ಎಚ್ಚರಿಕೆಯಿಂದ ಈ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೂಡಲೇ ಕೈ ಬಿಡಬೇಕು- ನೂರ್ ಶ್ರೀಧರ್, ಪದಾಧಿಕಾರಿ ಸಂಯುಕ್ತ ಹೋರಾಟ ಕರ್ನಾಟಕ
ಕೃಷಿ ಪ್ರದೇಶವನ್ನು ನಾಶ ಮಾಡಿ ನಿರ್ಮಾಣಗೊಂಡ ಲೇಔಟ್ ಹಾಗೂ ಬಡಾವಣೆಗಳು ಅಗತ್ಯ ಮೂಲಭೂತ ಸೌಕರ್ಯಗಳು ಇಲ್ಲದೇ ಬೆಂಗಳೂರು ಮಹಾನಗರದ ಭೂ ತಾಪಮಾನವನ್ನು ಗಣನೀಯವಾಗಿ ಹೆಚ್ಚಿಸಿ ರಿಯಲ್ ಎಸ್ಟೇಟ್ ಕಾಂಕ್ರೀಟ್ ಕಾಡಾನ್ನಾಗಿಸಿದೆ. ಲಕ್ಷಾಂತರ ನಿವೇಶನಗಳು, ನೂರಾರು ಅಪಾರ್ಟ್‌ಮೆಂಟ್‌ಗಳು ಹತ್ತಾರು ವರ್ಷಗಳಿಂದ ಖಾಲಿ ಬಿದ್ದಿವೆ. ಇಂತಹ ದುಸ್ಥಿತಿಯನ್ನು ವಿಸ್ತರಿಸಿ ಮಹಾನಗರದ ಜನ ಜೀವನವನ್ನು ಮತ್ತಷ್ಟು ಕಷ್ಟಕ್ಕೆ ಸಿಲುಕಿಸುವ ಬಿಡದಿ ಟೌನ್‌ಶಿಪ್ ನಂತಹ ಪರಿಸರ ವಿರೋಧಿ ಯೋಜನೆಗಳನ್ನು ಪರಿಸರವಾದಿಗಳು, ಸಾಹಿತಿಗಳು, ನೀತಿ ನಿರೂಪಕರು ಸೇರಿದಂತೆ ಎಲ್ಲ ಕಾಳಜಿಯುಳ್ಳ ನಾಗರಿಕರು ವಿರೋಧಿಸಬೇಕು- ಬಡಗಲಪುರ ನಾಗೇಂದ್ರ, ಪದಾಧಿಕಾರಿ ಸಂಯುಕ್ತ ಹೋರಾಟ ಕರ್ನಾಟಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...