Homeಕರ್ನಾಟಕಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

- Advertisement -
- Advertisement -

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಮತ್ತು ಯೋಜನೆಗಾಗಿ ಸುಮಾರು 9,640 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ.

ಸೋಮವಾರ (ಮೇ.18) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಸಿದ್ದನಗೌಡ ಪಾಟೀಲ, ನೂರ್ ಶ್ರೀಧರ್, ಟಿ.ಯಶವಂತ, ಪಿ.ಪಿ ಅಪ್ಪಣ್ಣ, ಪ್ರಕಾಶ್ ಸೇರಿದಂತೆ ರೈತರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 25 ಗ್ರಾಮಗಳ ಸುಮಾರು 9,640 ಎಕರೆ ಕೃಷಿ ಭೂಮಿ ನೀರಾವರಿ ಹೊಂದಿರುವ ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಸಮೃದ್ಧ ಹಸಿರು ಪ್ರದೇಶವಾಗಿದೆ ಎಂದರು.

ಈ ಪ್ರದೇಶವು ಜಿಬಿಎ ಗಡಿಗೆ ಹೊಂದಿಕೊಂಡಂತೆ ಇದ್ದು, ಬೆಂಗಳೂರು ಮಹಾನಗರಕ್ಕೆ ಹಾಲು, ಹಣ್ಣು, ತರಕಾರಿ ಮುಂತಾದ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಅಮೂಲ್ಯ ಆಹಾರದ ಕಣಜವಾಗಿದೆ. ಇಲ್ಲಿನ ಎಲ್ಲ ಕೃಷಿ ಕುಟುಂಬಗಳು ತಮ್ಮ ಸಣ್ಣ ಹಿಡುವಳಿಯಲ್ಲೇ ಮಿಶ್ರ ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ಅಡಿಕೆ ತಟ್ಟೆ ತಯಾರಿಕೆ ಮುಂತಾದ ಕೃಷಿ ಆಧಾರಿತ ಸಣ್ಣ ಉದ್ದಿಮೆಗಳನ್ನು ಕಟ್ಟಿಕೊಂಡು ಉತ್ತಮ ಮಾರುಕಟ್ಟೆಯನ್ನು ಕಂಡುಕೊಂಡಿದ್ದಾರೆ. ಇಂತಹ ಸುಸ್ಥಿರ ಬದುಕಿನ ಮೇಲೆ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೋರಾಟಗಾರರು ತಿಳಿಸಿದರು.

ಜಿಬಿಎ ಅನುಷ್ಠಾನಗೊಳಿಸುತ್ತಿರುವ ಬಿಡದಿ ಸಮಗ್ರ ಉಪ ನಗರ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿಯಲ್ಲಿ 2025ರ ಮಾ.13 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ತಕ್ಷಣವೇ, ಸುಮಾರು 3,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಈ ಭೂ ಸ್ವಾಧೀನಕ್ಕೆ ಒಪ್ಪಿಗೆ ಇಲ್ಲ ಎಂದು ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಇದುವರೆಗೂ ಈ ಯಾವ ರೈತರ ಆಕ್ಷೇಪಣೆಗಳನ್ನು ಸರ್ಕಾರ ಆಲಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಂದೂವರೆ ವರ್ಷದಿಂದ ವಿವಿಧ ಮಾದರಿಯಲ್ಲಿ ತಮ್ಮ ಬಲವಾದ ವಿರೋಧವನ್ನು ಇಲ್ಲಿನ ರೈತರು ದಾಖಲಿಸಿದ್ದು, 428ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಾ ಬಂದಿದ್ದರೂ, ಭಾದಿತ ರೈತರ ಜೊತೆ ಯಾವುದೇ ಸಮಾಲೋಚನೆ ನಡೆಸದೇ ಸಂಪುಟ ಅನುಮೋದನೆ ನೀಡಿರುವುದು ರೈತರ ಪ್ರಜಾಪ್ರಭುತ್ವ ಹಕ್ಕುಗಳ ನಗ್ನ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮ. ಕೂಡಲೇ ಸಿದ್ದರಾಮಯ್ಯ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಸರ್ಕಾರದ ರೈತ ವಿರೋಧಿ ನಡೆಯಿಂದಾಗಿ ಬಿಡದಿ ಮತ್ತೊಂದು ದೇವನಹಳ್ಳಿ ಹೋರಾಟ ಆಗಲಿಕ್ಕೆ ಹೊರಟಿದೆ. ಎರಡು ದಿನಗಳಾದರೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಸರ್ಕಾರ ರಾಜಧಾನಿಯನ್ನು ಬಂಡವಾಳಿಗರ ಬೆಂಗಳೂರು ಮಾಡಲಿಕ್ಕೆ ಹೊರಟಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕಾಗುತ್ತದೆ. ಬಂಡವಾಳಿಗರ ಪರ ಆಡಳಿತ ನಡೆಸಿದ್ದೇ ಆದಲ್ಲಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಖಂಡಿತವಾಗಿಯೂ ಅಧಿಕಾರ ಕಳೆದುಕೊಳ್ಳುತ್ತದೆ. ಎಚ್ಚರಿಕೆಯಿಂದ ಈ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೂಡಲೇ ಕೈ ಬಿಡಬೇಕು- ನೂರ್ ಶ್ರೀಧರ್, ಪದಾಧಿಕಾರಿ ಸಂಯುಕ್ತ ಹೋರಾಟ ಕರ್ನಾಟಕ
ಕೃಷಿ ಪ್ರದೇಶವನ್ನು ನಾಶ ಮಾಡಿ ನಿರ್ಮಾಣಗೊಂಡ ಲೇಔಟ್ ಹಾಗೂ ಬಡಾವಣೆಗಳು ಅಗತ್ಯ ಮೂಲಭೂತ ಸೌಕರ್ಯಗಳು ಇಲ್ಲದೇ ಬೆಂಗಳೂರು ಮಹಾನಗರದ ಭೂ ತಾಪಮಾನವನ್ನು ಗಣನೀಯವಾಗಿ ಹೆಚ್ಚಿಸಿ ರಿಯಲ್ ಎಸ್ಟೇಟ್ ಕಾಂಕ್ರೀಟ್ ಕಾಡಾನ್ನಾಗಿಸಿದೆ. ಲಕ್ಷಾಂತರ ನಿವೇಶನಗಳು, ನೂರಾರು ಅಪಾರ್ಟ್‌ಮೆಂಟ್‌ಗಳು ಹತ್ತಾರು ವರ್ಷಗಳಿಂದ ಖಾಲಿ ಬಿದ್ದಿವೆ. ಇಂತಹ ದುಸ್ಥಿತಿಯನ್ನು ವಿಸ್ತರಿಸಿ ಮಹಾನಗರದ ಜನ ಜೀವನವನ್ನು ಮತ್ತಷ್ಟು ಕಷ್ಟಕ್ಕೆ ಸಿಲುಕಿಸುವ ಬಿಡದಿ ಟೌನ್‌ಶಿಪ್ ನಂತಹ ಪರಿಸರ ವಿರೋಧಿ ಯೋಜನೆಗಳನ್ನು ಪರಿಸರವಾದಿಗಳು, ಸಾಹಿತಿಗಳು, ನೀತಿ ನಿರೂಪಕರು ಸೇರಿದಂತೆ ಎಲ್ಲ ಕಾಳಜಿಯುಳ್ಳ ನಾಗರಿಕರು ವಿರೋಧಿಸಬೇಕು- ಬಡಗಲಪುರ ನಾಗೇಂದ್ರ, ಪದಾಧಿಕಾರಿ ಸಂಯುಕ್ತ ಹೋರಾಟ ಕರ್ನಾಟಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...