Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...